ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂಬ ನಾಣ್ನುಡಿಯನ್ನು ನೀವೆಲ್ಲರೂ ಕೇಳಿರಬಹುದು.
ಈ ಪುಟದಲ್ಲಿ ಕನ್ನಡದ ಗಾದೆಗಳನ್ನು ಓದುಗರ ಅನುಕೂಲಕ್ಕಾಗಿ ಅವುಗಳ ಅರ್ಥದೊಡನೆ ಕೊಡಲಾಗಿದೆ. ಇಲ್ಲಿ ನೀವು ಜಾನಪದದ ಸೊಗಡನ್ನು ನೋಡಬಹುದು.ಗಾದೆಗಳು ಜೀವನದ ಸತ್ಯವನ್ನು ಎತ್ತಿ ಹಿಡಿಯುತ್ತವೆ .ಹಿರಿಯರ ಅನುಭವದ ಸಾರವೇ ಗಾದೆಗಳು.ಎಷ್ಟೋ ಕಡೆ ನಾಣ್ನುಡಿಗಳನ್ನು ಗಾದೆ ಎಂದು ಭ್ರಮಿಸುವ ಅಪಾಯವಿದೆ. ನಾಣ್ನುಡಿಗಳಿಗೂ ಗಾದೆಗಳಿಗೂ ವ್ಯತ್ಯಾಸವಿದೆ. ನಾಣ್ನುಡಿಗಳು ಆಯಾ ನಾಡಿನ ಪರಿಸರಕ್ಕೆ ಹೊಂದಿದಂತೆ ನಿಜವಾಗುತ್ತವೆ.ನಾಣ್ನುಡಿಗಳಿಗೆ ಕಾಲದೇಶಗಳ ಮಿತಿಯಿದೆ.ಆಯಾ ಸಮಯಕ್ಕೆ, ಜೀವನದ ವಿವಿಧ ಮಜಲುಗಳಲ್ಲಿ ಅನುಭವಕ್ಕೆ ಬಂದ ಸತ್ಯಗಳನ್ನು ನುಡಿಗಳಲ್ಲಿ ಹಿಡಿದಿಟ್ಟಿದ್ದಾರೆ.ಅವು ಎಲ್ಲಾ ದೇಶಗಳಲ್ಲೂ, ಎಲ್ಲಾ ಕಾಲಗಳಲ್ಲೂ ಸತ್ಯವಾಗಬೇಕಾಗಿಲ್ಲ. ಗಾದೆಗಳಿಗೆ ಕಾಲದೇಶಗಳ ಮಿತಿಯಿಲ್ಲ. ಅವು ಸರ್ವ ಕಾಲಿಕ, ಸಾರ್ವದೇಶಿಕವಾದವುಗಳು.ಎಲ್ಲದೇಶಗಳಲ್ಲೂ , ಎಲ್ಲಾ ಕಾಲಗಳಲ್ಲೂ ನಿಜವಾಗುವ ಸತ್ಯಗಳು.ಈ ಗಾದೆಗಳನ್ನು ಹೇಳಿದವರು ತಮ್ಮ ಹೆಸರು,ಪ್ರಸಿದ್ದಿಗೆ ಬರಲಿ ಎಂಬ ಉದ್ದೇಶದಿಂದ ಹೇಳಿದ್ದಲ್ಲ. ತಮ್ಮ ಹೆಸರನ್ನು ಸಹ ಹೇಳಿಲ್ಲ. ಗಾದೆಗಳು ಕನ್ನಡ ಸಾಹಿತ್ಯದ ಅತ್ಯಮೂಲ್ಯವಾದ ಸಂಪತ್ತು .ಈ ಗಾದೆಗಳ ಸಂಪತ್ತನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ.ಇಲ್ಲಿ ಗಾದೆಗಳನ್ನು ಅವುಗಳ ಅರ್ಥದೊಡನೆ ವಿವರಿಸುವಾಗ ನಾನು ಯಾವುದೇ ಒಂದು ಕ್ರಮವನ್ನು ಅನುಸರಿಸಲು ಹೋಗಿಲ್ಲ.ಅವು ನೆನಪಿಗೆ ಬಂದಹಾಗೆ ಅವಗಳನ್ನು ಬರೆಯುತ್ತ ಹೋಗಿದ್ದೇನೆ.ಮುಂದೆ ಇವುಗಳನ್ನು ಒಂದು ನಿರ್ದಿಷ್ಟವಾದ ರೀತಿಯಲ್ಲಿ ವಿಂಗಡಿಸುವ ಯೋಜನೆಯಿದೆ.ಇವುಗಳನ್ನು ಓದಿ ನಿಮ್ಮ ಅಭಿಪ್ರಾಯಗಳನ್ನೂ,ಈ ವೆಬ್ಸೈಟನ್ನು ಹೇಗೆ ಉತ್ತಮಪಡಿಸಬಹುದು ಎಂಬುದಕ್ಕೆ ನಿಮ್ಮ ಸಲಹೆಗಳನ್ನೂ ಬರೆದು ಸಹಕರಿಸಿ.
ಈ ಪುಟದಲ್ಲಿ ಕನ್ನಡದ ಗಾದೆಗಳನ್ನು ಓದುಗರ ಅನುಕೂಲಕ್ಕಾಗಿ ಅವುಗಳ ಅರ್ಥದೊಡನೆ ಕೊಡಲಾಗಿದೆ. ಇಲ್ಲಿ ನೀವು ಜಾನಪದದ ಸೊಗಡನ್ನು ನೋಡಬಹುದು.ಗಾದೆಗಳು ಜೀವನದ ಸತ್ಯವನ್ನು ಎತ್ತಿ ಹಿಡಿಯುತ್ತವೆ .ಹಿರಿಯರ ಅನುಭವದ ಸಾರವೇ ಗಾದೆಗಳು.ಎಷ್ಟೋ ಕಡೆ ನಾಣ್ನುಡಿಗಳನ್ನು ಗಾದೆ ಎಂದು ಭ್ರಮಿಸುವ ಅಪಾಯವಿದೆ. ನಾಣ್ನುಡಿಗಳಿಗೂ ಗಾದೆಗಳಿಗೂ ವ್ಯತ್ಯಾಸವಿದೆ. ನಾಣ್ನುಡಿಗಳು ಆಯಾ ನಾಡಿನ ಪರಿಸರಕ್ಕೆ ಹೊಂದಿದಂತೆ ನಿಜವಾಗುತ್ತವೆ.ನಾಣ್ನುಡಿಗಳಿಗೆ ಕಾಲದೇಶಗಳ ಮಿತಿಯಿದೆ.ಆಯಾ ಸಮಯಕ್ಕೆ, ಜೀವನದ ವಿವಿಧ ಮಜಲುಗಳಲ್ಲಿ ಅನುಭವಕ್ಕೆ ಬಂದ ಸತ್ಯಗಳನ್ನು ನುಡಿಗಳಲ್ಲಿ ಹಿಡಿದಿಟ್ಟಿದ್ದಾರೆ.ಅವು ಎಲ್ಲಾ ದೇಶಗಳಲ್ಲೂ, ಎಲ್ಲಾ ಕಾಲಗಳಲ್ಲೂ ಸತ್ಯವಾಗಬೇಕಾಗಿಲ್ಲ. ಗಾದೆಗಳಿಗೆ ಕಾಲದೇಶಗಳ ಮಿತಿಯಿಲ್ಲ. ಅವು ಸರ್ವ ಕಾಲಿಕ, ಸಾರ್ವದೇಶಿಕವಾದವುಗಳು.ಎಲ್ಲದೇಶಗಳಲ್ಲೂ , ಎಲ್ಲಾ ಕಾಲಗಳಲ್ಲೂ ನಿಜವಾಗುವ ಸತ್ಯಗಳು.ಈ ಗಾದೆಗಳನ್ನು ಹೇಳಿದವರು ತಮ್ಮ ಹೆಸರು,ಪ್ರಸಿದ್ದಿಗೆ ಬರಲಿ ಎಂಬ ಉದ್ದೇಶದಿಂದ ಹೇಳಿದ್ದಲ್ಲ. ತಮ್ಮ ಹೆಸರನ್ನು ಸಹ ಹೇಳಿಲ್ಲ. ಗಾದೆಗಳು ಕನ್ನಡ ಸಾಹಿತ್ಯದ ಅತ್ಯಮೂಲ್ಯವಾದ ಸಂಪತ್ತು .ಈ ಗಾದೆಗಳ ಸಂಪತ್ತನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ.ಇಲ್ಲಿ ಗಾದೆಗಳನ್ನು ಅವುಗಳ ಅರ್ಥದೊಡನೆ ವಿವರಿಸುವಾಗ ನಾನು ಯಾವುದೇ ಒಂದು ಕ್ರಮವನ್ನು ಅನುಸರಿಸಲು ಹೋಗಿಲ್ಲ.ಅವು ನೆನಪಿಗೆ ಬಂದಹಾಗೆ ಅವಗಳನ್ನು ಬರೆಯುತ್ತ ಹೋಗಿದ್ದೇನೆ.ಮುಂದೆ ಇವುಗಳನ್ನು ಒಂದು ನಿರ್ದಿಷ್ಟವಾದ ರೀತಿಯಲ್ಲಿ ವಿಂಗಡಿಸುವ ಯೋಜನೆಯಿದೆ.ಇವುಗಳನ್ನು ಓದಿ ನಿಮ್ಮ ಅಭಿಪ್ರಾಯಗಳನ್ನೂ,ಈ ವೆಬ್ಸೈಟನ್ನು ಹೇಗೆ ಉತ್ತಮಪಡಿಸಬಹುದು ಎಂಬುದಕ್ಕೆ ನಿಮ್ಮ ಸಲಹೆಗಳನ್ನೂ ಬರೆದು ಸಹಕರಿಸಿ.
- " (ಅನ್ಯ) ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ"
- " (ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು."
- " (ನೀನು)ಮೊಳ ಬಿಟ್ಟರೆ,(ನಾನು) ಮಾರು ಬಿಡುತ್ತೇನೆ"
- " ೮ತಿರುಳು ಹೋಗಿ ಬೆಂಡು ಉಳೀತು ತಿರೋಕಲ್ಲು"
- " ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು"
- " ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ"
- " ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ"
- " ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ"
- " ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ"
- " ಅಂಗೈ ಹುಣ್ಣಿಗೆ ಕನ್ನಡಿ ಯಾಕೆ"
- " ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು"
- " ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ"
- " ಅಂದು ಬಾ ಅಂದ್ರೆ ಮಿಂದು ಬಂದ"
- " ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ"
- " ಅಂಬಲಿಗೆ ಗತಿ ಇಲ್ಲದವ"
- " ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು"
- " ಅಕ್ಕ ನನ್ನವಳಾದ್ರೆ ಬಾವ ನನ್ನವನೇನು"
- " ಅಕ್ಕ ಬರಬೇಕು ಅಕ್ಕಿ ಮುಗೀಬಾರದು"
- " ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?"
- " ಅಕ್ಕ ಸತ್ತರೆ ಅಮಾಸೆ ನಿಲ್ಲದು,"
- " ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು"
- " ಅಕ್ಕನ ಚಿನ್ನವಾದ್ರೂ ಅಕ್ಕಸಾಲಿ ಟೊಣೆಯದೆ(=ಕದಿಯದೆ) ಬಿಡ"
- " ಅಕ್ಕನ ಹಗೆ ಬಾವನ ನಂಟು"
- " ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ"
- " ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು"
- " ಅಕ್ಕರೆಯಿದ್ದಲ್ಲಿ ದುಃಖವುಂಟು"
- " ಅಕ್ಕಸಾಲಿ ಅಕ್ಕನ ಚಿನ್ನಾನೂ ಬಿಡ"
- " ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ"
- " ಅಕ್ಕಿ ಅಂದ್ರೆ ಪ್ರಾಣ, ನೆಂಟ್ರು ಅಂದ್ರೆ ಜೀವ"
- " ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ"
- " ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ"
- " ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು"
- " ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ"
- " ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು"
- " ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ"
- " ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ"
- " ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ"
- " ಅಗ್ಗದ ಆಸೆಗೆ ಗೊಬ್ಬರ ತಗೊಂಡರು"
- " ಅಗ್ಗದ ಮಾಲು;ಮುಗ್ಗಿದ ಜೋಳ"
- " ಅಗ್ಗದಾಸೆಗೆ ಗೊಬ್ಬರ ಕೊಂಡುಕೊಡರು"
- " ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?"
- " ಅಜ್ಜ! ಮದುವೆ ಅಂದ್ರೆ ನನಗೋ ಅಂದ"
- " ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ."
- " ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು"
- " ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂಡನ ಚಿಂತೆ"
- " ಅಜ್ಜಿಗೆ ಅರಿವೆ ಚಿಂತೆ;ಮೊಮ್ಮಗಳಿಗೆ ಮದುವೆ ಚಿಂತೆ"
- " ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ"
- " ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ"
- " ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು."
- " ಅಟ್ಟಿಕ್ಕಿದೋಳಿಗಿನ್ನ ಬೊಟ್eye ಟಿಕ್ಕಿದೋಳು ಹೆಚ್ಚು"
- " ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು"
- " ಅಡಕೆಗೆ ಹೋದ ಮಾನ ಆನೆ ಕೊಟ್ಟರೆ ಬಂದೀತೆ?"
- " ಅಡವಿಯ ದೊಣ್ಣೆ ಪರದೇಸಿಯ ತಲೆ"
- " ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !( ಇದು ತಮಿಳು ಭಾಷೆಯ ಗಾದೆಯಾದರೂ ಕನ್ನಡಿಗರಲ್ಲಿ ಹೆಚ್ಚು ಪ್ರಚಲಿತವಿದೆ)"
- " ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ"
- " ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?"
- " ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ."
- " ಅಡಿಗೆ ಬಿದ್ಫರೂ ಮೀಸೆ ಮೇಲೆ"
- " ಅಡೀ ಅನ್ ಕೂಪಡರ್ತಕ್ಕ್ ಅವಳೇ ಇಲ್ಲೆ, ಪುಳ್ಳೆ ಪೇರ್ ರಾಮಕ್ರಷ್ಣ"
- " ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು"
- " ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ"
- " ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ"
- " ಅಡ್ಡ ಗೋಡೆಯ ಮೇಲೆ ದೀಪವಿಟ್ಟ ಹಾಗೆ ತಮ್ಮ ಅಭಿಪ್ರಾಯವನ್ನು ಮನಬಿಚ್ಚಿ ಹೇಳದೆ, ಯಾವ ಪಕ್ಷವನ್ನೂ ವಹಿಸದೆ, ಆ ಕಡೆಗೂ ಸರಿ , ಈ ಕಡೆಗೂ ಸರಿ ಎಂದು ಮಾತನಾದುವವರನ್ನು ಕುರಿತು ಈ ಗಾದೆಯನ್ನು ಹೆಳಿದೆ"
- " ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ."
- " ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು"
- " ಅಣ್ಣಿಗೇರ್ಯಾಗ ಎಣ್ಣೆ ಮೊಣಕಾಲ ಮಟ್ಟ"
- " ಅತಿ ಆಸೆ ಗತಿಗೇಡು"
- " ಅತಿ ಸ್ನೇಹ ಗತಿ ಕೇಡು"
- " ಅತಿಯಾದರೆ ಅಮೃತವೂ ವಿಷ"
- " ಅತಿವಿನ ಧೂರ್ತ ಲಕ್ಷಣ"
- " ಅತ್ತ ದರಿ; ಇತ್ತ ಪುಲಿ"
- " ಅತ್ತು ಹೆದರಿಸೋನೊಬ್ಬ"
- " ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ"
- " ಅತ್ತೆ ಆಸ್ತೀನ ಅಳಿಯ ದಾನ ಮಾಡಿದ"
- " ಅತ್ತೆ ಒಡೆದ ಕಂಚಿಗೆ ಬೆಲೆಇಲ್ಲ"
- " ಅತ್ತೆ ಒಡೆದ ಪಾತ್ರೆಗೆ ಬೆಲೆಯಿಲ್ಲ"
- " ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ"
- " ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ"
- " ಅತ್ತೆ ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ"
- " ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ."
- " ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು"
- " ಅದನ್ನೇ ಉಂಡೇನತ್ತೆಮ್ಮನವರೆ, ಕದ ತೆಗೀರಿ ಭಾವಯ್ಯನೋರೆ"
- " ಅದ್ನೇ ಉಂಡೇನ್ ಅತ್ತೆಮ್ನೋರೇ, ಕದ ತೆಗೀರಿ ಮಾವ್ನೋರೇ ಅಂದ್ರಂತೆ"
- " ಅಧರಕ್ಕೆ ಕಹಿ ಉದರಕ್ಕೆ ಸಿಹಿ"
- " ಅನಿಷ್ಟಕೆಲ್ಲ ಶನೀಶ್ವರ ಗುರಿ"
- " ಅನುಕೂಲ ಸಿಂಧು; ಅಭಾವ ವೈರಾಗ್ಯ"
- " ಅನುಭವಿಗೆ ಬೇರೆ ಮತವಿಲ್ಲ"
- " ಅನುರಾಧ ಬಂದರೆ ನಮ್ಮ ರಾಗಿ ನಮ್ಮದು"
- " ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ"
- " ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ"
- " ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು"
- " ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು"
- " ಅಪದ್ದಕ್ಕೆ ಅಪ್ಪಣೆ ಕೊಟ್ರೆ ಬಾಯಿಗೆ ಬಂದದ್ದೇ ಮಾತು"
- " ಅಪಾಯ ತೀರಿತು, ದೇವರನ್ನು ಮರೆತಾಯಿತು"
- " ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು"
- " ಅಪ್ಪ ಗುಡಿ ಕಟ್ಟಿದರೆ ಮಗ ಕಳಸ ಇಟ್ಟ"
- " ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ"
- " ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ"
- " ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ"
- " ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ"
- " ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ"
- " ಅಪ್ಪನ ಮಾತು ಕೇಳದವನು ಅಮ್ಮನ ಮಾತು ಕೇಳಿಯಾನೆ?"
- " ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು"
- " ಅಪ್ಪನ್ನೇ ಅಪ್ಪ ಅನ್ನದೋನು, ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?"
- " ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು ಅರಗಿನಂತೆ ತಾಯಿ,"
- " ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ"
- " ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು"
- " ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ"
- " ಅಯ್ಯೋ ಅಂದವರಿಗೆ ಆರುತಿಂಗಳು ಆಯಸ್ಸು ಕಡಿಮೆ ಅಂತೆ"
- " ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು"
- " ಅರಗಿನಂತೆ ತಾಯಿ, ಮರದಂತೆ ಮಕ್ಕಳು"
- " ಅರಣೆ (= ಹಾವು ರಾಣಿ) ಕಡಿದರೆ ಭರಣಿ"
- " ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ"
- " ಅರವತ್ತಕ್ಕೆ ಅರಳು ಮರಳು"
- " ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ"
- " ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು"
- " ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ"
- " ಅರಸು ಒಲಿದರೆ ಸಿರಿ ದೆಸೆಯಾಯ್ತು"
- " ಅರಿತರೆ ಮಾತನಾಡು, ಮರೆತರೆ ಕೂತು ನೋಡು"
- " ಅರಿತು ಮಾಡದ ದಾನ ತೆರೆದು ನೋಡದ ಕಣ್ಣಂತೆ"
- " ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ"
- " ಅರಿಯದೆ ಮಾಡಿದ ಪಾಪ ಅರಿತಂದು ಪರಿಹಾರ"
- " ಅರಿವಿನ ಹಾದಿ ಬೇರೆ"
- " ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ"
- " ಅರೆಗೊಡದ ಅಬ್ಬರವೇ ಬಹಳ."
- " ಅರೆಪಾವಿನವರ ಅಬ್ಬರ ಬಹಳ"
- " ಅರ್ತಿಗೆ (=ಪ್ರೀತಿಗೆ) ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ"
- " ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ"
- " ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ"
- " ಅರ್ಧ ಕಲಿತವನ ಆಬ್ಬರ ಹೆಚ್ಚು"
- " ಅರ್ಧ ತುಂಬಿದ ಗಡಿಗೆ ಬಹಳ ತುಳುಕುತ್ತಂತೆ"
- " ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು"
- " ಅಲಾ ಬಲಾ ಪಾಪಿ ತಲೀ ಮ್ಯಾಲೆ ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ"
- " ಅಲ್ಪ ವಿದ್ಯಾ ಮಹಾಗರ್ವಿ"
- " ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದನಂತೆ"
- " ಅಲ್ಪರ ಸಂಗ ಅಭಿಮಾನ ಭಂಗ"
- " ಅಲ್ಲ ಅಲ್ಲ ಪಾಪಿ ತಲೆ ಮೇಲೆ"
- " ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ"
- " ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ."
- " ಅವರವರ ತಲೆಗೆ ಅವರವರದೇ ಕೈ"
- " ಅಶ್ವಿನೀ ಸಸ್ಯನಾಶಿನೀ"
- " ಅಷ್ಟು ಕಂಡ್ಯ ಅಮಾಸೆ ಕಂಡ್ಯ ; ಹೊಟ್ಟೆ ನೋವಲ್ಲಿ ಕಂಡ್ಯ ಹಾಲು ಅನ್ನವ"
- " ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ"
- " ಅಹಂಕಾರದ ದೇವರಿಗೆ ಉದಾಸೀನವೆ ಮದ್ದು"
- " ಅಳಿದೂರಿಗೆ ಉಳಿದವನೇ ಗೌಡ"
- " ಅಳಿಯ ಅಲ್ಲ, ಮಗಳ ಗಂಡ"
- " ಅಳಿಯ ಮನೆ ತೊಳಿಯ"
- " ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ"
- " ಅಳಿಲ ಸೇವೆ, ಮಳಲ ಭಕ್ತಿ"
- " ಅಳಿವುದೇ ಕಾಯ ಉಳಿವುದೇ ಕೀರ್ತಿ"
- " ಅಳೋ ... ಮೇಲೆ ಗಳು ಬಿತ್ತು"
- " ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ"
- " ಆಕಳು ಕಪ್ಪಾದರೂ ಹಾಲು ಕಪ್ಪೆ ?"
- " ಆಕಳು ಕಪ್ಪಾದ್ರೆ ಹಾಲು ಕಪ್ಪೇನು"
- " ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ."
- " ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?"
- " ಆಕಾಶ ನೋಡೋಕೆ ನೂಕಾಟವೇಕೆ?"
- " ಆಕಾಶಕ್ಕೆ ಏಣಿ ಹಾಕಿದ ಹಾಗೆ"
- " ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ, ಆತ ಹೆಂಡ್ತಿನ ಬಿಟ್ಟು ಆರು ವರ್ಷ ಆಗಿತ್ತಂತೆ."
- " ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು"
- " ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ"
- " ಆಗುವ (ಅಡುವ) ವರೆಗಿದ್ದು ಆರುವವರೆಗೆ ಇರಲಾರರೇ"
- " ಆಗೊದೆಲ್ಲ ವೊಳ್ಳೆದಕ್ಕೆ"
- " ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ"
- " ಆಗೋದೆಲ್ಲಾ ಒಳ್ಳೇದಕ್ಕೆ"
- " ಆಚಾರ ಹೇಳೋಕ್ಕೆ,ಬದನೆಕಾಯಿ ತಿನ್ನೋಕೆ"
- " ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ"
- " ಆಟ ಕೆಟ್ಟರೆ ದೀವಟಿಗೆಯವನ ಸುತ್ತ"
- " ಆಟಕ್ಕುಂಟು,ಲೆಕ್ಕಕ್ಕಿಲ್ಲ"
- " ಆಡಿ ಉಂಡ ಮೈ ಅಟ್ಟು ಉಂಡೀತೇ?"
- " ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ"
- " ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ"
- " ಆಡಿದರೆ ಅರಗಿಣಿ ಕಾಡಿದರೆ ನಾಗರ ಕಾಟ"
- " ಆಡು ಮುಟ್ಟದ ಸೊಪ್ಪಿಲ್ಲ"
- " ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ"
- " ಆಡೋಣ ಬಾ ಕೆಡಿಸೋಣ ಬಾ"
- " ಆಡೋದು ಮಡಿ ಉಂಬೋದು ಮೈಲಿಗೆ"
- " ಆತುರಕ್ಕೆ ಅಜ್ಜಿ ಮೈನೆರೆದಳು"
- " ಆತುರಗಾರನಿಗೆ ಬುದ್ಧಿ ಮಟ್ಟ"
- " ಆತುರಗಾರನಿಗೆ ಬುದ್ಧಿಮಟ್ಟ ಯಾವ ಕೆಲಸವನ್ನೂ ಆತುರದಲ್ಲಿ ಮುಗಿಸುವ, ತಕ್ಷಣದಲ್ಲೇ ತೀರ್ಮಾನಿಸುವ ಸ್ವಭಾವ ಒಳ್ಳೆಯದಲ್ಲಆತುರಗಾರರಿಗೆ ಬುದ್ಧಿ ಅಷ್ಟಕಷ್ಟೆ ಎಂದು ಅಭಿಪ್ರಾಯ"
- " ಆತ್ಮೀಯವಾದ ಪ್ರೇಮ ಅಮರವಾದದ್ದು"
- " ಆದ ಕೆಲಸಕ್ಕೆ ಅತ್ತೆಗಳು ಬಂದಂತೆ"
- " ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!"
- " ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು"
- " ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ"
- " ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ"
- " ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?"
- " ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು"
- " ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ"
- " ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ"
- " ಆನೆಗೂ ಅಡಿ ತಪ್ಪೀತು"
- " ಆನೆಗೆ ಚಡ್ಡಿ ಹೊಲಿಸಿದ ಹಾಗೆ ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ"
- " ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ"
- " ಆನೆಯಂಥದೂ ಮುಗ್ಗರಿಸ್ತದೆ"
- " ಆಪತ್ತಿಗಾದವನೇ ನಿಜವಾದ ಗೆಳೆಯ"
- " ಆಪತ್ತಿಗಾದವನೇ ನಿಜವಾದ ಗೆಳೆಯ."
- " ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು"
- " ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ"
- " ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ."
- " ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ"
- " ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು"
- " ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ"
- " ಆರು ಕೊಟ್ಟರೆ ಅತ್ತೆ ಕಡೆ ,ಮೂರು ಕೊಟ್ಟರೆ ಮಾವನ ಕಡೆ ತಮ್ಮದೇ ಆದ ಅಭಿಪ್ರಾಯವಿರದೆ ಇರುವವರು ಯಾರು ಏನು ಹೇಳಿದರೆ ಅತ್ತಕಡೆ ವಾಲುತ್ತಾರೆ ತಮಗೆ ಅನುಕೂಲವಾಗುವ ಹಾಗೆ ಯಾರು ಮಾತನಾಡುವರೋ ಅವರ ಕಡೆಗೆ ಇವರ ಮಾತು"
- " ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ."
- " ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ"
- " ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ"
- " ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ"
- " ಆರುದೋಸೆ ಕೊಟ್ಟರೆ ಅತ್ತೆಕಡೆ;ಮೂರುದೋಸೆ ಕೊಟ್ಟರೆ ಮಾವನಕಡೆ"
- " ಆಲಸಿ-ಮುಂಡೇದಕ್ಕೆ ಎರಡು ಖರ್ಚು, ಲೋಭಿ-ಮುಂಡೇದಕ್ಕೆ ಮೂರು ಖರ್ಚು"
- " ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು"
- " ಆಲಸ್ಯಂ ಅಮೃತಂ ವಿಷಂ"
- " ಆವು ಕಪ್ಪಾದ್ರೆ ಹಾಲು ಕಪ್ಪೇನು"
- " ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ"
- " ಆಸೆ ಆಕಾಶದಷ್ಟು, ಸಾಧನೆ ಸಾಸಿವೆಯಷ್ಟೇ"
- " ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು"
- " ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ್ದು"
- " ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು"
- " ಆಸೆಗೆ ಕೊನೆಯಿಲ್ಲ"
- " ಆಸೆಗೆ ತಕ್ಕ ಪರಿಶ್ರಮ ಬೇಕು"
- " ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ"
- " ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ"
- " ಆಸೆಯೇ ಜೀವನ, ಜೀವನವೇ ಆಸೆ"
- " ಆಸೆಯೇ ದು:ಖಕ್ಕೆ ಮೂಲ"
- " ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು"
- " ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ"
- " ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ."
- " ಆಳಾಗಬಲ್ಲವನು ಅರಸನಾಗಬಲ್ಲ."
- " ಆಳಾಗಬಲ್ಲವನು ಅರಸಾಗಬಲ್ಲ"
- " ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು"
- " ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು"
- " ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು"
- " ಇಂಗು ತೆಂಗು ಇದ್ರೆ ಮಂಗಮ್ಮನೂ ಅಡಿಗೆ ಮಾಡ್ಯಾಳು"
- " ಇಂದಿನ ಸೋಲು ನಾಳಿನ ಗೆಲುವು"
- " ಇಂದಿನ ಸೋಲು ನಾಳಿನ ಗೆಲುವು."
- " ಇಂಬರಿತು ಕೊಡುವಳೆ ರಂಭೆ"
- " ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ"
- " ಇಕ್ಕಲಾರದ ಕೈ ಎಂಜಲು"
- " ಇಕ್ಕಲಾರದ ಕೈ ಎಂಜಲು ಇಕ್ಕುವಳು"
- " ಇಕ್ಕಲಾರದ ಕೈ ಎಂಜಲು ಇಟ್ಟ ಶಾಪ ಕೊಟ್ಟವನಿಗೆ ತಟ್ಟೀತು ಇಲ್ಲು ಪೋಗಂಡ ಅಲ್ಲು ಪೋಗಂಡ"
- " ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಿಕ್ಕು"
- " ಇಕ್ಕೇರಿ ತನಕ ಬಳಗ,"
- " ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ"
- " ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು"
- " ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ"
- " ಇಟ್ಟ ವಿಭೂತಿ ಪಟ್ಟದಂತೆ"
- " ಇಟ್ಟರೆ ತೊಟ್ಟರೆ ಪುಟ್ಟಕ್ಕ ಚೆಂದ"
- " ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ"
- " ಇಡಿಯ ಮುಳುಗಿದವನಿಗೆ ಚಳಿಯೇನು?ಮಳೆಯೇನು?"
- " ಇಡೀ ಮುಳುಗಿದರೂ ಮೂಗು ಮೇಲೆ"
- " ಇಡೀ ಮುಳುಗಿದರೂ ಮೂಗು ಮೇಲೆ ಇದ್ದ"
- " ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ"
- " ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ."
- " ಇತರೆ ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು"
- " ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು"
- " ಇತ್ತಿತ್ತ ಬಾ ಅಂದರೆ ;ಇದ್ದ ಮನೆನೂ ಕಿತ್ತು ಕೊಂಡರಂತೆ"
- " ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ"
- " ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ"
- " ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು"
- " ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು"
- " ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ"
- " ಇದ್ದದ್ದನ್ನು ಇದ್ದಂತೆ ಹೇಳಿದರೆ ಎದ್ದುಬಂದು ಎದ್ಗೆ ಒದೆದರಂತೆ"
- " ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ"
- " ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ"
- " ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು"
- " ಇದ್ದದ್ದು ಹೋಯಿತು ಮದ್ದಿನ ಗುಣದಿಂದ"
- " ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ"
- " ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು"
- " ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು"
- " ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?"
- " ಇನ್ನೊಬ್ಬರ ಮಾತಿಗೆ ಕಿವಿಗೊಡಬೇಡ, ಚಾಡಿಹೇಳಿ ಜಗಳ ಹಚ್ಚಬೇಡ"
- " ಇಬ್ಬರ ಜಗಳ ಮೂರನೆಯವನಿಗೆ ಲಾಭ"
- " ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ"
- " ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!"
- " ಇಬ್ಬರು ಹೆಂಡಿರ ಕಾಟ ಇರಳು ತಿಗಣೆಯ ಕಾಟ"
- " ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)"
- " ಇರಲಾರದೆ ಇರುವೆ ಬಿಟ್ಟುಕೊಂಡು"
- " ಇರುವೆಗೆ ಇರುವೆ ಮೈ ಭಾರ, ಆನೆಗೆ ಆನೆ ಮೈ ಭಾರ"
- " ಇರುಳು ಕಂಡ ಭಾವೀಲಿ ಹಗಲು ಬಿದ್ದರು"
- " ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ"
- " ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ"
- " ಇಲಿ ಬಂತು ಎಂದರೆ ಹುಲಿ ಬಂತು ಎಂದರು"
- " ಇಲಿ ಬೇಟೆಗೆ ತಮಟೆ ಬಡಿದಂಗೆ"
- " ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ"
- " ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ."
- " ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು"
- " ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡಬಾರದು"
- " ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ"
- " ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು"
- " ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು"
- " ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು"
- " ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ, ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು"
- " ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ"
- " ಈಚಲು ಮರದ ಕೆಳಗೆ ಕುಳಿತು ಹೆಂಡ ಕುಡಿದ ಹಾಗೆ"
- " ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ"
- " ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು"
- " ಈಸಿ ನೋಡು , ಇದ್ದು ಜೈಸಿ ನೋಡು"
- " ಉ.. ಕುಡಿದರೂ ತನ್ನಿಚ್ಚೇಯಿಂದ ಇರಬೇಕು"
- " ಉಂಡ ಮನೆ ಜಂತೆ ಎಣಿಸಬಾರದು"
- " ಉಂಡ ಮನೆ ಜಂತೆ ಎಣಿಸಬಾರದು,"
- " ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ"
- " ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ"
- " ಉಂಡವರಿಗುಂಡಿದ್ದೇ ಬಂತು, ಗುಂಡುಕಲ್ಲಿಗೆ ನವೆದಿದ್ದೇ ಬಂತು"
- " ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ"
- " ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ."
- " ಉಂಡುಂಡು ಮಲಗೋ ಗುಂಡಕಲ್ಲು ಸಿದ್ದ"
- " ಉಂಡೂ ಹೋದ; ಕೊಂಡೂ ಹೋದ"
- " ಉಂಬಾಗ ಉಡುವಾಗ ಊರೆಲ್ಲ ನೆಂಟರು"
- " ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ"
- " ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ"
- " ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ."
- " ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ"
- " ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?"
- " ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ"
- " ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ"
- " ಉಟ್ಟು ಉಡಲಾರ ಕೊಟ್ಟು ಸೈರಿಸಲಾರ"
- " ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು"
- " ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ"
- " ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು"
- " ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು"
- " ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು"
- " ಉಣ್ಣು ಬಾ ಅಂದ್ರೆ, ಇರಿ ಬಾ ಅಂದ್ರಂತೆ"
- " ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ"
- " ಉತ್ತಮನು ಎತ್ತ ಹೋದರೂ ಶುಭವೇ"
- " ಉತ್ತಮರು ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು"
- " ಉತ್ತಮವಾದ ನಗು ನೇಸರನ ಮಗು"
- " ಉತ್ತಮವಾದ ನಗು ನೇಸರನ ಮಗು."
- " ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ"
- " ಉತ್ತರನ ಪೌರುಷ ಒಲೆಯ ಮುಂದೆ;ನನ್ನ ಪೌರುಷ ಎಲೆಯ ಮುಂದೆ"
- " ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ"
- " ಉತ್ತು ಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು"
- " ಉದ್ದುದ್ದ ಮಾತಿನವರ ಮೊಳಕೈ ಮೊಂಡ"
- " ಉದ್ದುದ್ದ ಮಾತಿನವರ ಮೊಳಕೈ ಮೊಂಡ."
- " ಉದ್ಯೋಗವೇ ಗಂಡಸಿಗೆ ಲಕ್ಷಣ"
- " ಉಪಕಾರಕ್ಕೋಗಿ ಉಪದ್ರ ಬಂತು"
- " ಉಪಾಸ ಇದ್ರೂ ಉಪದ್ರ ಇರಬಾರ್ದು"
- " ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು"
- " ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ"
- " ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ"
- " ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ"
- " ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು"
- " ಉಪ್ಪು ತಿಂದವನು ನೀರು ಕುಡಿಯಲೇ ಬೇಕು"
- " ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ"
- " ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ"
- " ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ"
- " ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ"
- " ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ"
- " ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ"
- " ಉಸ್ ಎಂದರೆ ಉಸಳಿ ಬೇಡಿದ್ದನಂತೆ"
- " ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು"
- " ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ"
- " ಉಳ್ಳವನು ತಪ್ಪನೆ ಬಾ (=ತಕ್ಷಣ ಬಾ ) ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ"
- " ಊಟ ತನ್ನಿಚ್ಚೆ, ನೋಟ ಪರರಿಚ್ಚೆ"
- " ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ"
- " ಊಟಕ್ಕಿಲ್ಲದ ಉಪ್ಪಿನಕಾಯಿಕ್ಕೆ ಸಮಾನ"
- " ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ"
- " ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ"
- " ಊಟವೆಂದರೆ ಊರು ಬಿಟ್ಟುಹೋದಂತೆ"
- " ಊಟವೆಂದರೆ ಊರು ಬಿಟ್ಟುಹೋದಂತೆ."
- " ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ"
- " ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ"
- " ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು"
- " ಊರಿಗಾಗದ ಗೌಡ, ಮೇಲೆರಗುವ ಗಿಡುಗ"
- " ಊರಿಗೆ ಉಪಕಾರಿ, ಮನೆಗೆ ಮಾರಿ"
- " ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ"
- " ಊರಿಗೆ ದಾರೀಯ ಯಾರು ತೋರಿದರೇನು"
- " ಊರಿಗೆ ದೊರೆ ಆದರೂ ತಾಯಿಗೆ ಮಗನೆ."
- " ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?"
- " ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?"
- " ಊರಿಗೆ ಬಂದವಳು ನೀರಿಗೆ ಬಾರಳೆ"
- " ಊರಿಗೆಲ್ಲಾ ಒಬ್ಬಳೇ ಪದ್ಮಾವತಿ"
- " ಊರಿಗೊಂದು ದಾರಿಯಾದ್ರೆ, ಎಡವಟ್ಟಂಗೆ ಅವನದ್ದೇ ದಾರಿ"
- " ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?"
- " ಊರು ಕೊಳ್ಳೆ ಹೋದಮೇಲೆ ದಿಡ್ಡಿಬಾಗಿಲು ಹಾಕಿದರಂತೆ"
- " ಊರು ದೂರಾಯಿತು ಕಾಡು ಹತ್ತರಾಯಿತು"
- " ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು"
- " ಊರು ಸುಟ್ಟರೂ ಹನುಮಂತರಾಯ ಹೊರಗೆ"
- " ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ"
- " ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ"
- " ಊರು ಹೋಗು ಅನ್ನುತ್ತೆ;ಕಾಡು ಬಾ ಅನ್ನುತ್ತೆ"
- " ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ."
- " ಊರೆಲ್ಲ ಸೂರೆ ಆದ ಮೇಲೆ ಕೋಟೆ ಬಾಗಿಲ ಮುಚ್ಚಿದರು"
- " ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು"
- " ಎಂಜಲ ಕೈಲಿ ಕಾಗೆನೂ ಹೊಡೆಯೊಲ್ಲ"
- " ಎಂಜಲ ತಿಂದರೂ ಅಂಜದೆ ತಿನ್ನು"
- " ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ ಸಾವಿರ ಕುದುರೆ ಸರದಾರ,"
- " ಎಂಟು ವರ್ಷಕ್ಕೆ ನನ್ನ ಮಗ ದಂಟಾದ"
- " ಎಂಟು ಹೊನ್ನು ಘನವಾದ ನಂಟು"
- " ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ"
- " ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ"
- " ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು"
- " ಎಟ್ಟ್ (ಹಟಮಾರಿ) ಗಂಡಗೆ ಖೊಟ್ಟಿ ಹೆಂಡತಿ"
- " ಎಡಗಣ್ಣು ಹೊಡೆದರೆ ನಾರಿಗೆ ಶುಭ"
- " ಎಡಗಣ್ಣು ಹೊಡೆದರೆ ನಾರಿಗೆ ಶುಭ."
- " ಎಡಗಾಲು ನಡೆಸಿತು;ಬಲಗಾಲು ಬರಿಸಿತು"
- " ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು"
- " ಎಡವಿದ ಕಾಲು ಎಡವುದು ಹೆಚ್ಚು"
- " ಎಡವಿದ ಕಾಲೇ ಎಡವುದು ಹೆಚ್ಚು"
- " ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ"
- " ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?"
- " ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ."
- " ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು"
- " ಎಣ್ಣೆ ಬರುವಾಗ ಗಾಣ ಮುರೀತು"
- " ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ"
- " ಎತ್ತಲೊ ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು ಇದ್ದೂ"
- " ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ."
- " ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು"
- " ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ"
- " ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ"
- " ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ"
- " ಎತ್ತು ಈಯಿತು ಎಂದರೆ ಕೊಟ್ಟಿಗೆಗೆ ಕಟ್ಟು ಎಂದಂತಾಗುತ್ತದೆ ಎತ್ತು ಈಯುತ್ತದೆಯೇ ಎಂದರೆ ಎತ್ತು ಕರು ಹಾಕುತ್ತದೆಯೇ ಎಂದು ಅಲೋಚಿಸುವ ತಾಳ್ಮೆ ಇರಬೇಕು ಅದಿಲ್ಲದೆ ಪ್ರತಿಕ್ರಿಯೆ ತೋರಿಸಿದರೆ ತನ್ನ ಅಲ್ಪ ಬುದ್ಢಿಯನ್ನೂ , ದಡ್ದತನವನ್ನೂ ತೋರಿಸಿಕೊಂಡಂತಾಗುತ್ತದೆ"
- " ಎತ್ತು ಏರಿಗೆಳೀತು, ಕೋಣ ನೀರಿಗೆಳೀತು."
- " ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು"
- " ಎತ್ತು ಮಾರಿದವಗೆ ಹಗ್ಗದ ಆಸೆಯೇ"
- " ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?"
- " ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು"
- " ಎತ್ತ್ತು ಏರಿಗೆಳೆಯಿತು ಕೋಣ ನೀರಿಗೆಳೆಯಿತು"
- " ಎದ್ದವನು ಗೆದ್ದಾನು"
- " ಎದ್ದೋಗೋ ಮಾತು ಬಿದ್ದೋಗಲಿ ಆಡೋಕಾಗಲ್ಲ, ಅನುಭವಿಸಕ್ಕಾಗಲ್ಲ"
- " ಎರಡು ಕಡೆ ನಂಬಿ ಕುರುಡು ದಾಸಯ್ಯ ಕೆಟ್ಟ"
- " ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ"
- " ಎರಡು ದೋಣಿಗಳೊಳಗೆ ಕಾಲಿಡಬಾರದು"
- " ಎರಡೂ ಕೈ ತಟ್ಟಿದರೆ ಸದ್ದು"
- " ಎರಡೂ ಕೈ ಸೇರಿದರೆ ಚಪ್ಪಾಳೆ"
- " ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು"
- " ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!"
- " ಎಲೆ ಎತ್ತೋ ಗುಂಡ ಅಂದರೆ ಉಂಡವರೆಷ್ಟು ಮಂದಿ ಅಂದನಂತೆ"
- " ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ"
- " ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು"
- " ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು."
- " ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ"
- " ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ."
- " ಎಲ್ಲರ ಮನೆ ದೋಸೇನೂ ತೂತೆ"
- " ಎಲ್ಲರ ಮನೆ ದೋಸೇನೂ ತೂತೇ."
- " ಎಲ್ಲರ ಮನೆಯ ದೋಸೆಯೂ ತೂತೆ !"
- " ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ"
- " ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ"
- " ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ"
- " ಎಲ್ಲರೂ ಪಲ್ಲಕ್ಕಿಲಿ ಕೂತರೆ ಹೊರೋರು ಯಾರು"
- " ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು"
- " ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ"
- " ಎಲ್ಲಾ ಜಾಣ, ತುಸು ಕೋಣ."
- " ಎಲ್ಲಾ ಬಣ್ಣ ಮಸಿ ನುಂಗಿತು"
- " ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ"
- " ಎಲ್ಲಾರ ಮನೇ ದೋಸೇನೂ ತೂತು"
- " ಎಷ್ಟು ದಕ್ಷಿಣೆಯೋ ಅಷ್ಟು ಪ್ರದಕ್ಷಿಣೆ"
- " ಎಸರಿಗೆ ಅಕ್ಕಿ ಇಲ್ಲ"
- " ಎಳ್ಳ ತಿಂದ ಋಣ ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು"
- " ಎಳ್ಳಂತು ಎಣ್ಣೆಗೊಣಗಿತು;ನಿನ್ಯಾಕೆ ಒಣಗಿದೆಯೆ ಮುರಳೆ ಬೀಜವೆ?"
- " ಏತಿ ಅಂದರೆ ಪ್ರೇತಿ ಅಂದಂತೆ"
- " ಏತಿ ಅಂದರೆ ಪ್ರೇತಿ ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ"
- " ಏನಕೇನ ಪ್ರಕಾರೇಣ ಪ್ರಸಿದ್ಧ ಪುರುಷೋಭವ"
- " ಏನಾದರೂ ಆಗು ಮೊದಲು ಮಾನವನಾಗು"
- " ಏನಾದರೇನು ತಾನು ತಾನಾಗದವರೆಗೆ"
- " ಏನು ಬೇಡಿದರೊಬ್ಬ ದಾನಿಯನ್ನು ಬೇಡು, ದೀನನಾ ಬೇಡಿದರೆ ಆ ದೀನ ಏನು ಕೊಟ್ಟಾನು?"
- " ಏನೂ ಇಲ್ಲದವಗೆ ಭಯವಿಲ್ಲ"
- " ಏನೆ ಬೋರಿ ಓಡಾಟ? ; ಸಾವ್ಕಾರ್ರ ಮನೆ ದ್ಯಾವ್ರೂಟ"
- " ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು"
- " ಏರಿದವ ಇಳಿದಾನು ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?"
- " ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ"
- " ಐದು ಬೆರಳೂ ಒಂದೇ ಸಮ ಇರೋಲ್ಲ"
- " ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ"
- " ಒಂದಕ್ಕೆರಡು ದಂಡ,"
- " ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ"
- " ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ"
- " ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ"
- " ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ"
- " ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ"
- " ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ"
- " ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ"
- " ಒಂದು ಹೊತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರು ಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನ್ನ ಹೊತ್ತುಕೊಂಡು ಹೋಗಿ"
- " ಒಂದೇ ರಟ್ಟೆ ಮುರಿದು ರೊಟ್ಟಿ ತಿನ್ನು"
- " ಒಂದೊಂದು ಕಾಲಕ್ಕೆ ಒಂದೊಂದು ಪರಿ ಸಿರಿತನ"
- " ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು"
- " ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ"
- " ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ."
- " ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ"
- " ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು"
- " ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ"
- " ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ."
- " ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?"
- " ಒಡೆದ ಹಾಲು ಹೆಪ್ಪಿಗೆ ಬಂದೀತೇ"
- " ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು"
- " ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು."
- " ಒನಕೆ ಮುಂಡು ಚಿಗುರಿದಂತೆ"
- " ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ"
- " ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ"
- " ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ"
- " ಒಬ್ಬರ ಕೂಳು ಇನ್ನೊಬ್ಬರ ಕುತ್ತು"
- " ಒಬ್ಬರ ಕೂಳು ಇನ್ನೊಬ್ಬರ ಕುತ್ತು."
- " ಒಲಿದರೆ ನಾರಿ ಮುನಿದರೆ ಮಾರಿ"
- " ಒಲುಮೆಗೆ ನೋಟ ಬೇಟವೇ ಮೊದಲು"
- " ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು"
- " ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು"
- " ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು"
- " ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು"
- " ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ"
- " ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ."
- " ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು"
- " ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು"
- " ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು"
- " ಒಳ್ಳೇನಾದ ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು"
- " ಒಳ್ಳೇರ ಒಡನಿದ್ದು ಕಳ್ಳ"
- " ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ"
- " ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ"
- " ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?"
- " ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ"
- " ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ."
- " ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ"
- " ಓದಿ ಓದಿ ಮರುಳಾದ ಕೂಚು ಭಟ್ಟ"
- " ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ"
- " ಓದಿ ಓದಿ ಮರುಳಾದ ಕೂಚುಭಟ್ಟ"
- " ಓದಿ ಓದಿ ಮರುಳಾದ ಕೋಚು ಭಟ್ಟ"
- " ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು"
- " ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ,"
- " ಓದಿದರ ಅರಿವು ಮೇದ ಕಬ್ಬಿನ ರಸ"
- " ಓದುವಾಗ ಓದು; ಆಡುವಾಗ ಆಡು"
- " ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ"
- " ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು"
- " ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ"
- " ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ"
- " ಕಂಕುಳಲ್ಲಿ ಮಗು ಎತ್ತಿಕೊಂಡು ಊರೆಲ್ಲಾ ಹುಡುಕಿದಂತೆ"
- " ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂತಂತೆ"
- " ಕಂಗಾಲಾದರೂ ಹಂಗಾಳಾಗಬಾರದು"
- " ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ"
- " ಕಂಡ ಕಳ್ಳ ಜೀವ ಸಹಿತ ಬಿಡ"
- " ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ"
- " ಕಂಡದ್ದನ್ನು ಕಂಡಂತೆ ಹೇಳಿದರೆ ಕೆಂಡದಂತಹ ಕೋಪ"
- " ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ"
- " ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ"
- " ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು"
- " ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು"
- " ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ"
- " ಕಂಡಿದ್ಬಿಡದು ಮುಂಡೆದೆವ್ವ"
- " ಕಂಡೋರ ಆಸ್ತಿಗೆ ನೀನೇ ಧಣಿ"
- " ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ"
- " ಕಂತೆಗೆ ತಕ್ಕ ಬೊಂತೆ"
- " ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು"
- " ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ"
- " ಕಜ್ಜಿ ಹೋದರೂ ಕಡಿತ ಹೋಗಲಿಲ್ಲ"
- " ಕಟ್ಟಾಣಿ ರಂಬೆಯ ಬಯಸಿದ"
- " ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ"
- " ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ"
- " ಕಟ್ಟೆ ಹಾಕಿ ಅನ್ನ ಉಣ್ಣು"
- " ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು"
- " ಕಡಲೆ ತಿಂದು ಕೈತೊಳೆದ ಹಾಗೆ"
- " ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು"
- " ಕಡು ಕೋಪ ಬಂದಾಗ ತಡಕೊಂಡವನೇ ಜಾಣ"
- " ಕಡ್ಡೀನ ಗುಡ್ಡ ಮಾಡು"
- " ಕಡ್ಡೀನ ಗುಡ್ಡ ಮಾಡು."
- " ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ"
- " ಕಣ್ಣರಿಯದಿದ್ದರೂ ಕರುಳರಿಯುತ್ತದೆ"
- " ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು"
- " ಕಣ್ಣಿಗೂ ಮೂಗಿಗೂ ಮೂರು ಗಾವುದ"
- " ಕಣ್ಣಿಗೂ ಮೂಗಿಗೂ ಮೂರು ಗಾವುದ."
- " ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು"
- " ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ"
- " ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ."
- " ಕಣ್ಣು ಕುರುಡಾದರೆ ಬಾಯಿ ಕುರುಡೇ"
- " ಕಣ್ಣೆರಡಾದರೂ ನೋಟ ಒಂದೇ"
- " ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು"
- " ಕತ್ತಿ ಬಂಗಾರದ್ದಾಗಿದೆಯೆಂದು ಕತ್ತು ಕೊಯ್ದುಕೊಳ್ಳಲು ಸಾಧ್ಯವೇ?"
- " ಕತ್ತಿ ವೈರಿ ಕೈಯಲ್ ಕೊಟ್ಟು ಬೆನ್ನ ಮಾಡಿ ನಿಂತನಂತೆ"
- " ಕತ್ತೆಗೆ ತಿಪ್ಪೆಯೇ ತವರುಮನೆ"
- " ಕತ್ತೆಗೆ ಯಾಕೆ ಹತ್ತಿಕಾಳು?"
- " ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ"
- " ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು"
- " ಕತ್ತೆಯಾಗಬೇಡ ಕಾಗೆಯಾಗು"
- " ಕದ ತಿನ್ನೋವನಿಗೆ ಹಪ್ಪಳ ಈಡಲ್ಲ"
- " ಕನಿಗೇಡಿಗೆ(ಸ್ವಾರ್ಥಿಗೆ) ಗತಿ ಇಲ್ಲ"
- " ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?"
- " ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ"
- " ಕಬ್ಬಿಣ ಕಾದಿರುವಾಗಲೇ ಬಡಿಯಬೇಕು"
- " ಕಬ್ಬು ಡೊಂಕಾದರೆ ಸಿಹಿ ಡೊಂಕೆ ?"
- " ಕಬ್ಬು ಡೊಂಕಾದ್ರೆ ಸವಿ ಡೊಂಕೇ"
- " ಕಯ್ಯಾರೆ ಮಾಡುವ ಧರ್ಮ ಲೇಸು"
- " ಕರಣಗಳ ತಡೆದು ನಿಲಬಾರದು"
- " ಕರುಬಿದವರ ಮನೆ ಬರಿಮನೆ"
- " ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ."
- " ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ"
- " ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ."
- " ಕರೆಯದವರ ಮನೆಗೆ ಕಳಸಗಿತ್ತಿಯಾಗು"
- " ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು"
- " ಕರ್ಮ ಕಳೆಯುವವರೆಗೆ ಮರ್ಮದಲ್ಲಿರು"
- " ಕಲಹವೇ ಕೇಡಿಗೆ ಮೂಲ"
- " ಕಲಹವೇ ಕೇಡಿಗೆ ಮೂಲ."
- " ಕಲಿತವನಿಗಿಂತ ನುರಿತವನೇ ಮೇಲು"
- " ಕಲ್ತ ಕೈ ಕದ್ದಲ್ಲದೆ ಬಿಡದು"
- " ಕಲ್ತದ್ ಬಿಟ್ಟೆಯಾ ಕಲಕೇತಿ ಅಂದ್ರೆ ಊರು ಬಿಟ್ರು ನಾ ಕಲ್ತದ್ ಬಿಡಲ್ಲ ಅಂದ್ಲಂತೆ"
- " ಕಲ್ಲ ನಾಗರ ಕಂಡರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು"
- " ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು"
- " ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ"
- " ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ"
- " ಕಷ್ಟ ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?"
- " ಕಷ್ಟ ಪಟ್ಟರೆ ಫಲವುಂಟು"
- " ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ"
- " ಕಷ್ಟದಂತೆ ಫಲ, ಮನದಂತೆ ಮಹಾದೇವ"
- " ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ"
- " ಕಹಿ ಪದಾರ್ಥ ತಿಂದು ಸಿಹಿ ಮಾತನಾಡು"
- " ಕಳೆದ ದಿನಗಳು ಬರೆದ ಪುಟಗಳಂತೆ"
- " ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು"
- " ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ"
- " ಕಳ್ಳನ ಕಾವಲಿಟ್ಟ ಹಾಗೆ"
- " ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ"
- " ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ"
- " ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ"
- " ಕಳ್ಳನ ಮನಸ್ಸು ಹುಳ್ಳಗೆ"
- " ಕಳ್ಳನ ಮನಸ್ಸು ಹುಳ್ಳಹುಳ್ಳಗೆ"
- " ಕಳ್ಳನ ಹೆಂಡತಿ ಎಂದಿದ್ದರೂ ...ಯೆ"
- " ಕಳ್ಳನ ಹೆಂಡತಿ ಎಂದಿದ್ದರೂ ಮುಂ.."
- " ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ"
- " ಕಳ್ಳನನ್ನು ನಂಬಿದರೂ ಕುಳ್ಳನನ್ನು ನಂಬಬಾರದು"
- " ಕಳ್ಳನಿಗೊಂದು ಪಿಳ್ಳೆ ನೆವ"
- " ಕಳ್ಳನಿಗೊಂದು ಪಿಳ್ಳೆನೆವ"
- " ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು"
- " ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ"
- " ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ."
- " ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?"
- " ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು"
- " ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ"
- " ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ"
- " ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ"
- " ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿನೇ"
- " ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ"
- " ಕಾಯಕವನ್ನು ಸದಾ ಮಾಡು, ಸೋಮಾರಿತನವನ್ನು ಬಿಡು"
- " ಕಾಯಕವೇ ಕೈಲಾಸ"
- " ಕಾರ್ಯವಾಸಿ ಕತ್ತೆ ಕಾಲು ಕಟ್ಟು"
- " ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು"
- " ಕಾಲಕ್ಕೆ ತಕ್ಕಂತೆ ನಡಿಯಬೇಕು,ತಾಳಕ್ಕೆ ತಕ್ಕಂತೆ ಕುಣಿಯಬೇಕು"
- " ಕಾಲಕ್ಕೆ ತಕ್ಕಂತೆ ನಡೆಯಬೇಕು,"
- " ಕಾಲಿಗೆ ಬಿದ್ದು ಕಾಲುಂಗರ ಬಿಚ್ಚಿಕೊಂಡರಂತೆ"
- " ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ"
- " ಕಾಲಿನದು ಕಾಲಿಗೆ; ತಲೆಯದು ತಲೆಗೆ"
- " ಕಾಲ್ಮುರುಕ ದೇವರಿಗೆ ಕೈಲಾಸವೇ"
- " ಕಾವಿ ಉಟ್ಟವರೆಲ್ಲಾ ಸನ್ಯಾಸಿಗಳಲ್ಲ ಬೂದಿ ಬಳಿದವರೆಲ್ಲ ಬೈರಾಗಿಗಳಲ್ಲ"
- " ಕಾಸಿಗೆ ತಕ್ಕ ಕಜ್ಜಾಯ."
- " ಕಾಸಿಗೊಂದು,ಕೊಸರಿಗೆರಡು"
- " ಕಾಸಿದ್ರೆ ಕೈಲಾಸ"
- " ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು"
- " ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ"
- " ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ"
- " ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ."
- " ಕಿಡಿಯಿಂದ ಕಾಡ ಸುಡ ಬಹುದು"
- " ಕಿಡಿಯಿಂದ ಕಾಡ ಸುಡಬಹುದು"
- " ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ"
- " ಕಿವುಡಟ್ಯ ಅಂದ್ರೆ ಮೂಗುಂಡ್ಯ ಅಂದನಂತೆ"
- " ಕೀಟ ಸಣ್ಣದಾದರೂ ಕಾಟ ಬಹಳ"
- " ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ"
- " ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ"
- " ಕೀಳನ ಕೆಣಕಬೇಡ, ಮೇಗಾಲು ತುರಿಸಬೇಡ"
- " ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ"
- " ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು"
- " ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿನೋಡಿಕೊಂಡಂತೆ"
- " ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ"
- " ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ"
- " ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ"
- " ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ"
- " ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ."
- " ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ."
- " ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ"
- " ಕುಂಬಾರನಿಗೊಂದು ವರುಷ ದೊಣ್ಣೆಗೊಂದುನಿಮಿಷ"
- " ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು"
- " ಕುಚುಕು ಬುದ್ಧಿ ಹೊಕ್ಕವನು ಕೆಟ್ಟ ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ"
- " ಕುಡಿಗೆ ಕುಂಬಳಕಾಯಿ ಭಾರವೇ?"
- " ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ ... ಅದ್ದುವ ಬುದ್ಧಿ)"
- " ಕುಣಿಯಲಾರದವಳು ನೆಲ ಡೊಂಕು ಅಂದಳಂತೆ"
- " ಕುಣಿಯಲಾರದವಳು ನೆಲಡೊಂಕು ಎಂದಳಂತೆ"
- " ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ"
- " ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ"
- " ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ"
- " ಕುದುರೆ ಕಂಡರೆ ಕಾಲುನೋವು"
- " ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!"
- " ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ"
- " ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ"
- " ಕುರಿ ಹಿಂಡಲ್ಲಿ ತೋಳ ಹೊಕ್ಕಂತೆ"
- " ಕುರು ಮೇಲೆ ಬರೆ ಎಳೆದ ಹಾಗೆ"
- " ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ"
- " ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ"
- " ಕುಲ ಬಿಟ್ಟರೂ ಛಲ ಬಿಡಬೇಡ"
- " ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ"
- " ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ"
- " ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ"
- " ಕೂತು ಉಂಡವನಿಗೆ ಕುಡಿಕೆ ಹಣ ಸಾಲದು ಕೆಲಸ ಮಾಡದೆ ಸೋಮಾರಿಯಾಗಿ ಜೀವನ ನಡೆಸುವವರಿಗೆ ಈ ಗಾದೆಕೂಡಿಟ್ಟ ಹಣ ಖರ್ಚು ಮಾಡುತ್ತಿದ್ದ ಹಾಗೆ ಮುಗಿಯುತ್ತ ಹೋಗುತ್ತದೆಯೇ ಹೊರತು ಹೆಚ್ಚ್ವುವುದಿಲ್ಲ ಕಷ್ಟಪಟ್ಟು ಕೆಲಸ ಮಾಡಿ ಇರುವ ಹಣವನ್ನು ರೂಢಿಸಿಕೊಂಡರೆ ಅದು ಬೆಳೆಯುತ್ತ ಹೋಗುತ್ತದೆಅದು ಬಿಟ್ಟು ಇರುವ ಹಣವನ್ನು ಮುಗಿಸುತ್ತ ಹೋದರೆ ಒಂದಲ್ಲ ಒಂದು ದಿನ ಅದು ಮುಗಿದು ಬದುಕುವ ದಾರಿ ಇಲ್ಲದೆ ಹೋಗುತ್ತದೆ, ಅಷ್ಟೇ ಅಲ್ಲ ಕೆಲಸ ಮಾಡದೆ ಸೋಮಾರಿಯಾಗಿ ಕಾಲ ಕಳೆಯುವ ಅಭ್ಯಾಸ ಮಾಡಿಕೊಂಡ ಮೇಲೆ ಕೆಲಸ ಮಾಡುವುದೂ ಸಾಧ್ಯವಾಗದೆ ಜೀವನ ನರಕವಾಗುತ್ತದೆ"
- " ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು"
- " ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು"
- " ಕೂತುಕೊಂಡು ಹೇಳುವವನ ಕೆಲಸ ಊರು ಮಾಡಿದರೂ ಸಾಲದು"
- " ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ"
- " ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು"
- " ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರಂತೆ"
- " ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ"
- " ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು"
- " ಕೂಳಿಗೆ ಕೇಡು ಭೂಮಿಗೆ ಭಾರ"
- " ಕೂಳಿಗೆ ಮೂಲ ಭೂಮಿಗೆ ಭಾರ"
- " ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ"
- " ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ."
- " ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ"
- " ಕೃಷಿತೋನಾಸ್ತಿ ದುರ್ಭಿಕ್ಷಂ"
- " ಕೆಟ್ಟ ಅಡಿಗೆ ಅಟ್ಟವಳೇ ಜಾಣೆ"
- " ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು"
- " ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು"
- " ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?"
- " ಕೆಟ್ಟದ್ದನ್ನು ಬಯಸಬೇಡ, ಒಳ್ಳೆಯದನ್ನು ಬಿಡಬೇಡ"
- " ಕೆಟ್ಟು ಪಟ್ಟಣ ಸೇರು"
- " ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು"
- " ಕೆಟ್ಟು ಬದುಕಬಹುದು ಬದುಕಿ ಕೆಡಬಾರದು"
- " ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ"
- " ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ"
- " ಕೆಡುವವರು ಮನೇಲಿದ್ರು ಕೆಡುತ್ತಾರೆ"
- " ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು"
- " ಕೆರೆಗೆ ತೊರೆ ಕೂಡಿ ಸರೋವರವಾಯ್ತು"
- " ಕೆರೆಯ ನೀರ ಕೆರೆಗೆ ಚೆಲ್ಲಿ"
- " ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ"
- " ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ"
- " ಕೆಲಸವಿಲ್ಲದ ಬಡಗಿ ಮಗುವಿನ ... ಕೆತ್ತಿದ"
- " ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು"
- " ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅಂದನಂತೆ"
- " ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು"
- " ಕೇಡು ಬರೋ ಕಾಲಕ್ಕೆ ಬುದ್ಧಿಗೇಡು"
- " ಕೇಳುವವರ ಮುಂದೆ ಹೇಳುವವರು ದಡ್ಡರು"
- " ಕೈ ಕೆಸರಾದರೆ ಬಾಯಿ ಮೊಸರು"
- " ಕೈ ಕೆಸರಾದರೆ ಬಾಯಿ ಮೊಸರು."
- " ಕೈ ಕೆಸರಾದ್ರೆ ಬಾಯಿ ಮೊಸರು"
- " ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ"
- " ಕೈಗೆ ಬಂದ ತುತ್ತು ಬಾಯಿಗೆ ಇಲ್ಲ"
- " ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ"
- " ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ."
- " ಕೈಗೆಟುಕದ ದ್ರಾಕ್ಷಿ ಹುಳಿ"
- " ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ"
- " ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ"
- " ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ"
- " ಕೈಲಾಗದೋನು ಮೈ ಪರಚಿಕೊಂಡ"
- " ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ"
- " ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು"
- " ಕೊಂಕಿಗೆ ಕೊಂಕೇ ಮದ್ದು"
- " ಕೊಂಡಾಡುತ್ತ ಜಗದ ಇಚ್ಚೆಯನ್ನೆ ನುಡಿದರೆ ಜಗವೆಲ್ಲ ತನ್ನ ಮುದ್ದಾಡುತಿತ್ತು"
- " ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ"
- " ಕೊಂದ ಪಾಪ ತಿಂದು ಪರಿಹಾರ"
- " ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)"
- " ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ"
- " ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ"
- " ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ"
- " ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ"
- " ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ"
- " ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ"
- " ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ"
- " ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ"
- " ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ"
- " ಕೊಡದ ಲೋಭಿ ಮಾತು ಕೊಡಲಿ ಪೆಟ್ಟು"
- " ಕೊಡಲಾರದ ಹೆಣ್ಣಿಗೆ ತೆರವ ಕೇಳಿದರಂತೆ"
- " ಕೊಡಲಿ ಕಾವು ಕುಲಕ್ಕೆ ಸಾವು"
- " ಕೊಡುವ ದೇವರು ಬಡವನೇ?"
- " ಕೊಡುವವನ ಕೈ ಯಾವಾಲು ಮೇಲೆ"
- " ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು"
- " ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ"
- " ಕೊಲ್ಲದಿರುವುದೇ ಧರ್ಮ"
- " ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು"
- " ಕೋ' ಅನ್ನೋದು ಕುಲದಲ್ಲಿಲ್ಲ ,'ತಾ' ಅನ್ನೋದು ತಾತರಾಯನ ಕಾಲದ್ದು"
- " ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ"
- " ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು"
- " ಕೋಟಿಗೆ ಒಬ್ಬ ಕುಬೇರ, ನೋಟಕ್ಕೆ ಒಬ್ಬ ಸುಂದರ"
- " ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ"
- " ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ"
- " ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು"
- " ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು"
- " ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)"
- " ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು"
- " ಕೋತಿ ಕಜ್ಜಾಯ ಹಂಚಿದ ಹಾಗೆ."
- " ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ"
- " ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ"
- " ಕೋತಿ ತಾನೂ ಕೆಡದೆ ವನಾನೂ ಕೆಡಿಸ್ತಂತೆ"
- " ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು"
- " ಕೋತಿಗೆ ಹೆಂಡ ಕುಡಿಸಿದಂತೆ"
- " ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು"
- " ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ"
- " ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ"
- " ಕೋಪ ಪಾಪ ತಂತು ಪಾಪ ತಾಪ ತಂತು"
- " ಕೋಪ ಬೀವುದೇ ಸಮತೆ ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು"
- " ಕೋಪದಲ್ಲಿ ಕುಯ್ದ ಮೂಗು ಶಾಂತವಾದಾಗ ಬಂದೀತೇ"
- " ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ"
- " ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?"
- " ಕೋಮಟಿ ಕೊಡ ;ಜೈನಿಗ ಬಿಡ"
- " ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು."
- " ಕೋಳಿ ಕೇಳಿ ಸಂಬಾರ ಅರೆದರಂತೆ"
- " ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?"
- " ಕ್ರಮ ಕಾಣದ ನಾಯಿ ಕಪಾಳೆ ನೆಕ್ತು"
- " ಖಂಡಿತ ವಾದಿ, ಲೋಕ ವಿರೋಧಿ"
- " ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ"
- " ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ"
- " ಗಂಟು ಕಳ್ಳರು ಸಂತೇಲಿ ಮಂತ್ರ ಹೇಳಿದಂಗೆ"
- " ಗಂಟೂ ಹೋಯ್ತು;ನಂಟೂ ಹೋಯ್ತು"
- " ಗಂಡ ಸರಿಯಿದ್ರೆ ಗುಂಡೂ ಪಾವನ"
- " ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ"
- " ಗಂಡ ಹೆಂಡಿರ ಜಗಳ ಉಂಡು ಮಲಗುವತನಕ"
- " ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ."
- " ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ"
- " ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು."
- " ಗಂಡಸಿಗೇಕೆ ಗೌರಿ ದು:ಖ ?"
- " ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು"
- " ಗಂಡಹೆಂಡಿರ ಜಗಳ ಉಂಡು ಮಲಗುವ ತನಕ"
- " ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ"
- " ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ"
- " ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ"
- " ಗಡ್ಡಕ್ಕೆ ಬೇರೆ ಸೀಗೇಕಾಯಿ"
- " ಗಣಪತಿಯನ್ನು ಮಾಡೋಕ ಅಂದ್ರೆ ಅವರಪ್ಪನನ್ನು ಮಾಡಿದರಂತೆ"
- " ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ"
- " ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ"
- " ಗದ್ದೆ ಸುಟ್ಟರೂ ಹಾಳಾಗದು ಗಾದೆ"
- " ಗದ್ದೆ ಸುಟ್ಟರೂ ಹಾಳಾಗದು ಗಾದೆ."
- " ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ"
- " ಗಳಕ್ಕನೇ ಉಂಡವ ರೋಗಿ, ಗಳಿಗೆ ಉಂಡವ ಭೋಗಿ"
- " ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು"
- " ಗಾಣ ಸುತ್ತಿದ ಎತ್ತಿನ ಹಗೆ"
- """ ಗಾಣಗಿತ್ತಿ ಅಯ್ಯೋ ಅಂದ್ರೆ ನೆತ್ತಿ ತಣ್ಣಗಾಗುತ್ಯೆ ""
- ಗಾಯದ ಮೇಲೆ ಉಪ್ಪುಸುರಿದಂತೆ"""""
- " ಗಾಣವಾಡದೆ ಎಣ್ಣೆ ಬಂದೀತೇ"
- " ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?"
- " ಗಾಯದ ಮೇಲೆ ಬರೆ ಎಳೆದಂತೆ"
- " ಗಾಯದ ಮೇಲೆ ಬರೆ ಕೊಟ್ಟಂತೆ"
- " ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ"
- " ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ"
- " ಗಾಳಿ ಬಂದಾಗ ತೂರಿಕೋ"
- " ಗಿಡ ಮೂರು ಮೊಳ, ಕಾಯಿ ಆರು ಮೊಳ"
- " ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ"
- " ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?"
- " ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?"
- " ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು"
- " ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರು."
- " ಗುಂಪಿನಲ್ಲಿ ಗೋವಿಂದ"
- " ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು"
- " ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ"
- " ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ"
- " ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ"
- " ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು"
- " ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?"
- " ಗುರುವಿಗೆ ತಿರುಮಂತ್ರ"
- " ಗುರುವಿಗೇ ತಿರುಮಂತ್ರ"
- " ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ"
- " ಗೆದ್ದವ ಸತ್ತ ಸೋತವ ಸತ್ತ"
- " ಗೆದ್ದೆತ್ತಿನ ಬಾಲ ಹಿಡಿ"
- " ಗೆದ್ದೆತ್ತಿನ ಬಾಲ ಹಿಡಿದ ಹಾಗೆ"
- " ಗೆಳೆತನದಲ್ಲಿ ಮೋಸಮಾಡಬೇಡ"
- " ಗೋರ್ಕಲ್ಲ ಮೇಲೆ ಮಳೆಗರೆದಂತೆ"
- " ಗೋವಿಂದ ಭಟ್ಟ ಬಾವೀಲಿ ಬಿದ್ದ ಇದ್ದವರು ಇದ್ದ ಹಾಗೆ"
- " ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ ಜೀನ ಗಳಿಸಿದ ;"
- " ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು."
- " ಚಂಡಾಲ ದೇವರಿಗೆ ಚಪ್ಪಲಿ ಸೇವೆ"
- " ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ"
- " ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ"
- " ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ."
- " ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ"
- " ಚಿಂತೆ ಇಲ್ಲದವನಿಗೆ ಸಂತೆಯಲ್ಲಿಯೂ ನಿದ್ದೆ."
- " ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು"
- " ಚಿಂತೆ ಮಾಡಿದರೆ ಸಂತೆ ಸಾಗೀತೆ?"
- " ಚಿಂತೆಇಲ್ಲದವನು ಸಂತೆಯಲ್ಲೂ ಮಲಗುತ್ತಾನೆ"
- " ಚಿತ್ತದ ಕಳವಳ ನಿಲ್ಲಿಸಿದವರೇ"
- " ಚಿತ್ತವಿಲ್ಲದವಳ ಒಡಗೂಟ"
- " ಚಿತ್ತಾ ಮಳೆ ವಿಚಿತ್ರ ಬೆಳೆ!"
- " ಚಿತ್ತಾರದ ಅಂದವನ್ನು ಮಸಿ ನುಂಗಿತು"
- " ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?"
- " ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?"
- " ಚೂಸ್ತೆ ಸುಮಾರು ವೆಸ್ತೆ ಡಮಾರು"
- " ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ"
- " ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ"
- " ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ."
- " ಚೇಳಿಗೆ ಪಾರುಪತ್ಯ ಕೊಟ್ಟಹಾಗೆ"
- " ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ"
- " ಚೌಲದಾಗ ದೌಲು ಮಾಡು"
- " ಜಗವೆಲ್ಲ ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು"
- " ಜಟ್ಟಿ ಜಾರಿದರೆ ಅದೂ ಒಂದು ಪಟ್ಟು"
- " ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ"
- " ಜನ ಮರುಳೋ ಜಾತ್ರೆ ಮರುಳೋ"
- " ಜನಕ್ಕಂಜದಿದ್ದರೂ ಮನಕ್ಕಂಜಬೇಕು"
- " ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ ]"
- " ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು"
- " ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು."
- " ಜಾಣ ತಿಂದ ಶೆಟ್ಟಿ ಬಿಟ್ಟಲ್ಲೆ ಪಟ್ಣ"
- " ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು"
- " ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ"
- " ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ"
- " ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ"
- " ಜಾತ್ರೆಯೊಟ್ಟಿಗೆ ಗೋವಿಂದು"
- " ಜಾರುವುದು ತಪ್ಪಿದರೆ ಏರುವುದು ಸಾಧ್ಯ"
- " ಜಿನ ಧರ್ಮವೇ ಜೀವಧರ್ಮ ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ"
- " ಜೀವ ಜೀವವ ತಿಂದು ಜೀವಿಸುತಿದೆ"
- " ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು"
- " ಜ್ಯೋತಿಯ ನೆಲೆ ಅರಿತವನೇ ಯೋಗಿ"
- " ಟೊಳ್ಳು ಮಾತು ಸುಳ್ಳಿಗಿಂತ ಕಡೆ"
- " ಠಕ್ಕು ಇರುವವನಿಗೆ ಠಿಕಾಣಿ ಸಿಗದು"
- " ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು (=ದುಡ್ಡು) ನನ್ನ ಹೆಂಡ್ರನ್ನ ಕೇಳು"
- " ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು"
- " ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ"
- " ಡೇ ಕಟ್ಟುವವನ ಮುಂದೆ ಮುಡಿಯೇನು"
- " ತಂತು ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ"
- " ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು"
- " ತಕ್ಕಡಿ ಬಲ್ಲದೇ ಮನೆಯ ಬಡತನವ"
- " ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ"
- " ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು"
- " ತಗಣೇ ಉಪದ್ರವ ಮಗಳಿಗೂ ಬಿಡಲಿಲ್ಲ"
- " ತಗಲುಗಾರನಿಗೆ (= ದಗಲ್ ಬಾಜ್) ಬಗಲ ಮೇಲೆ ಜ್ಞ್ಯಾನ"
- " ತಗ್ಗಿದವ ಎಂದಿಗೂ ನುಗ್ಗಾಗ ತಗ್ಗು ದವಸಕ್ಕಾಗಿ ಹಗ್ಗ ಕೊಂಡು ಕೊಂಡ"
- " ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ"
- " ತಟಕಿನಿಂದ ತಟಪಟವಾಯಿತು ತಟಕು ಬಿದ್ದು ಮಠಾ ಕೆಡಿಸಿತು"
- " ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ"
- " ತಟಸ್ಥನಾದವನಿಗೆ ತಂಟೆಯೇನು?"
- " ತಟ್ಟನೆ ಆಡಿದರೆ ಕೊಟ್ಟಷ್ಟು ಫಲ"
- " ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ"
- " ತಡವ ಮಾಡುವವನ ಗೊಡವೆ ಬೇಡ ತ"
- " ತಡವಿದರೆ ಮಡಿ ಸಹಾ ಕೆಡುವುದು"
- " ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ"
- " ತಣ್ಣೀರು ಆದರೂ ಪುಣ್ಯದಿಂದ ದೊರಕಬೇಕು"
- " ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು"
- " ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು."
- " ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ"
- " ತನಗಿಲ್ಲದ್ದು ಎಲ್ಲಿದ್ದರೇನು"
- " ತನಗೆ ಇಲ್ಲದವಳು ಮಕ್ಕಳಿಗೆ ಏನು ಹೊದಿಸ್ಯಾಳು"
- " ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು"
- " ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು"
- " ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು"
- " ತನು ಮೃಗನಾಭಿ ಬೇಡಿತು"
- " ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ"
- " ತನ್ನ ಅಕ್ಕನ ಅರಿಯದವಳು ನೆರೆಮನೆ ಬೊಮ್ಮಕ್ಕನ ಬಲ್ಲಳೇ?"
- " ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ"
- " ತನ್ನ ಓಣೀಲಿ ನಾಯಿಯೇ ಸಿಂಹ"
- " ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ"
- " ತನ್ನ ತಾ ತನ್ನಿಂದಲೇ ಅರಿಯಬೇಕು"
- " ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ"
- " ತನ್ನ ತಾ ಬಲ್ಲವನೆ ಬಲ್ಲವ"
- " ತನ್ನ ತಾನರಿತರೆ ತನ್ನರಿವೆ ಗುರು"
- " ತನ್ನ ತಾನರಿತರೆ ತಾನ್ಆದಾನು ತನ್ನ ತಾ ಮರೆತರೆ ತಾ ಹೋದಾನು"
- " ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು"
- " ತನ್ನ ನೆರಳಿಗೆ ತಾನಂಜಿ ನಡೆಯಬೇಕು"
- " ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?"
- " ತನ್ನ ಮರ್ಯಾದೆ ಕೆಟ್ಟವ ಪರರ ಮರ್ಯಾದೆ ಇಟ್ಟಾನೆ?"
- " ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ"
- " ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ."
- " ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ"
- " ತನ್ನ ಹೊಟ್ಟೆ ತಾ ಹೊರೆಯದವ ಮುನ್ನಾರ ಸಲಹುವ?"
- " ತನ್ನೂರಲಿ ರಂಗ, ಪರೂರಲಿ ಮಂಗ"
- " ತನ್ನೂರಲಿ ರಂಗ, ಪರೂರಲಿ ಮಂಗ ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ"
- " ತನ್ನೂರಲ್ಲಿ ರಂಗ, ಪರೂರಲ್ಲಿ ಮಂಗ"
- " ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ"
- " ತಪಸ್ಸು ಇದ್ದವನೇ ಗಭಸ್ತಿ (=ಕಾಂತಿ)"
- " ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ"
- " ತಪ್ಪಿ ಬಿದ್ದವನಿಗೆ ತೆಪ್ಪ (=ದೋಣಿ) ಏನು ಮಾಡೀತು"
- " ತಪ್ಪಿದವನಿಗೆ ಒಪ್ಪು ಇಲ್ಲ ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು"
- " ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ"
- " ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?"
- " ತಬ್ಬಳಿ ದೇವರಿಗೆ ತಂಗಳ ನೈವೇದ್ಯ"
- " ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ"
- " ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು"
- " ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು"
- " ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ"
- " ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ"
- " ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು"
- " ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ"
- " ತರಗು ತಿಂಬವನಿಗೆ ಒರಗೊಂದು ಕೇಡು"
- " ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು ತರಗು (ಮರದಿಂದ ಬಿದ್ದ ಒಣ ಎಲೆಗಳು)ಮೊರದಲ್ಲಿ ಹಿಡಿಯದು "
- " ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ"
- " ತರಗೆಲೆ ಅಡಿಕೆ ತಿರಿದು ತಿನ್ನಬೇಕೆ"
- " ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ ತರಹರಿಸಾಳಾರದವಳು"
- " ತರಲೆ ಕೇಳುವವ ಮರುಳಗಿಂತ ಕಡೆ ತಲೆಗೆ ಎಣ್ಣೆ ಇಲ್ಲ"
- " ತರವಲ್ಲದ್ದು ಮಾಡಬಾರದು ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ"
- " ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು"
- " ತರುವವ ಮರೆತರೆ ಮೊರ ಏನು ಮಾಡೀತು"
- " ತರುವವ ಹೋದಮೇಲೆ ಮರಗುವವರುಂಟೇ"
- " ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು"
- " ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು"
- " ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು"
- " ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು"
- " ತಲೆ ಸೀಳಿದರೆ ಎರಡಕ್ಷರ ಇಲ್ಲ"
- " ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?"
- " ತಲೆಗೆಲ್ಲಾ ಒಂದೇ ಮಂತ್ರವಲ್ಲ"
- " ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು"
- " ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ"
- " ತಲೇ ಕೂದಲು ಉದ್ದವಿದ್ದವಳು ಹ್ಯಾಗೆ ಕಟ್ಟಿದರೂ ಚಂದ"
- " ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ (=ತಿರುಕ)"
- " ತಲೇ ಸಿಡಿತಕ್ಕೆ ಮಲಶೋಧನೇ ಕೊಂಡ ಹಾಗೆ"
- " ತವಡು ತಿಂಬುವನಿಗೆ ವಯ್ಯಾರ ಯಾಕೆ"
- " ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ"
- " ತವರೂರಿನ ದಾರೀಲಿ ಕಲಿಲ್ಲ ಮುಳ್ಳಿಲ್ಲ"
- " ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ"
- " ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು (ಒಕ್ಕಲಿಗರ ಸಮೂಹ) ಹೋದೀತೋ?"
- " ತಳಾ ಬಿಟ್ಟು ಬಂಡಿ ಹಾರದು"
- " ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ"
- " ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ"
- " ತಾ ಕಳ್ಳೆ ಪರರ ನಂಬಳು,"
- " ತಾ ಕಾಣದ ದೇವರು ಪೂಜಾರಿಗೆ ವರ ಕೊಟ್ಟೀತೇ?"
- " ತಾ ಕೆಡುತ್ತಾ ಏಳು ನೆರೆ ಕೆಡಿಸಿದ ತಿಗಳಗಿತ್ತಿಯ ಬಾಯಿ ಕೆಣಕಬೇಡ"
- " ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು"
- " ತಾ ಬಲವೋ ಜಗ ಬಲವೋ"
- " ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು"
- " ತಾಗದೆ ಬಾಗದು ಬಿಸಿಯಾಗದೆ ಬೆಣ್ಣೆ ಕರಗದು"
- " ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ ತಾತಾಚಾರ್ಯರ ಮನೆಗೆ ಏನಪ್ಪಣೆ?"
- " ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ"
- " ತಾನು ಕಳ್ಳ ,ಪರರ ನಂಬ"
- " ತಾನು ಕಳ್ಳ ಪರರನ್ನು ನಂಬ"
- " ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು"
- " ತಾನು ಜಾರಿಬಿದ್ದು ಉಣ್ಣೆಯಂತ ನೆಲ ಅಂದ"
- " ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು"
- " ತಾನು ತಿಂಬೋದು ಪಲ್ಲೆ ಸೊಪ್ಪು"
- " ತಾನು ನೆಟ್ಟ ಬೀಳು (ಬಳ್ಳಿ) ತನ್ನ ಎದೆಗೆ ಹಬ್ಬಿತು"
- " ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು"
- " ತಾನು ಸಾಯಬೇಕು ಸ್ವರ್ಗಾ ಪಡೆಯಬೇಕು"
- " ತಾನು ಹೋದರೆ ಮಜ್ಜಿಗೆ ಇಲ್ಲ ಮೊಸರಿಗೆ ಚೀಟು"
- " ತಾನುಂಟೋ ಮೂರು ಲೋಕವುಂಟೋ"
- " ತಾನುಂಟೋ? ಮೂರು ಲೋಕವುಂಟೋ? *ತಾ ಕೋಡಗ ಪರರ ಅಣಕಿಸಿತು"
- " ತಾನೂ ತಿನ್ನ; ಪರರಿಗೂ ಕೊಡ"
- " ತಾನೊಂದೆಣಿಸಿದರೆ ದೈವವೊಂದೆಣಿಸಿತು"
- " ತಾನೊಲಿದ ಮಂಕು ಮಾಣಿಕ್ಯ"
- " ತಾಪತ್ರಯದವನಿಗೆ ತಾಪೆ/ಚಾಪೆ ಯಾಕೆ"
- " ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್ತಂತೆ"
- " ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು"
- " ತಾಯಂತೆ ಕರು ನಾಯಂತೆ ಬಾಲ ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ"
- " ತಾಯಿ ಒಂದಾದರೂ ಬಾಯಿ ಬೇರೆ"
- " ತಾಯಿ ಕಂಡ್ರೆ ತಲೆ ಬೇನೆ"
- " ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ"
- " ತಾಯಿ ಬೇಕು ಇಲ್ಲವೆ ಬಾಯಿ ಬೇಕು"
- " ತಾಯಿ ಬೇಕು ಇಲ್ಲವೇ ಬಾಯಿ ಬೇಕು"
- " ತಾಯಿ ಬೇಕು ಇಲ್ಲವೇ ಬಾಯಿ ಬೇಕು."
- " ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ"
- " ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ"
- " ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು"
- " ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ"
- " ತಾಯಿಗೆ ಕಂಡರೆ ತಲೆ ನೋವು"
- " ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ"
- " ತಾಯಿಗೆ ಸೇರದ್ದು ನಾಯಿಗೂ ಸೇರದು"
- " ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ"
- " ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ ತಾರಕ್ಕೆ (ಎರಡು ಕಾಸಿನ ನಾಣ್ಯ)"
- " ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು"
- " ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ"
- " ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ"
- " ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು"
- " ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು."
- " ತಾಯಿಲ್ಲದ ತವರು ಕಾಟಕದಿದ್ದ ಅಡವಿ"
- " ತಾಯೀನೇ ತಿಂದೋಳು, ಅತ್ತೇನ ಬಿಟ್ಟಾಳೆಯೇ?"
- " ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ"
- " ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ *ತಾರುಣ್ಯವೇ ರೂಪು ಕಾರುಣ್ಯವೇ ಗುಣ"
- " ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು"
- " ತಾರೇ ಬಡ್ಡೀ ನೀರಾ ಅಂದ್ರೆ ತರುವೆನು ನಿಲ್ಲೊ ತಿರುಕ"
- " ತಾರೇಮರದ ಕಾಯಾದರೂ ಕರೆದರೆ ಬಂದೀತೇ"
- " ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು"
- " ತಾಸಿನ ಗೊತ್ತು ದಾಸಿಗೆ ತಿಳಿದೀತೇ?"
- " ತಾಸಿನ ಬಟ್ಟಲು ನೀರ ಕುಡಿದರೆ ತಾಸಿಗೆ ಕೊಡತೀ ಪೆಟ್ಟು"
- " ತಾಳ ತಪ್ಪಿದ ಬಾಳು, ತಾಳಲಾರದ ಗೋಳು"
- " ತಾಳ ತಪ್ಪಿದರೆ ಕುಣಿಯೊದು ತಪ್ಪುವುದಿಲ್ಲ"
- " ತಾಳಕ್ಕೆ ತಕ್ಕ ಮೇಳ"
- " ತಾಳಕ್ಕೆ ತಕ್ಕಂತೆ ಕುಣಿಯಬೇಕು"
- " ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ"
- " ತಾಳಲಾರದ ವಿರಹ ತಿಣಕಿದರೆ ಹೋದೀತೇ?"
- " ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು"
- " ತಾಳಿದವ ಬಾಳ್ಯಾನು"
- " ತಾಳಿದವನು ಬಾಳಿಯಾನು"
- " ತಾಳಿದವನು ಬಾಳಿಯಾನು ತಾಳ್ಮೆಯಿದ್ದವನು ಜೀವನವನ್ನು ಅನುಭವಿಸುತ್ತಾನೆ, ಒಳ್ಳೆಯ ದಿನಗಳನ್ನು ಕಾಣುತ್ತಾನೆಇದನ್ನು ಸಮರ್ಥಿಸಲು ಇನ್ನೂ ಒಂದು ಗಾದೆಯನ್ನು ಹೇಳಬಹುದು"
- " ತಾಳು ಬಡಿದರೆ ಕಾಳು ಸಿಕ್ಕೀತೇ"
- " ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು"
- " ತಾಳೆಮರ ಉದ್ದವಾದರೆ ಕೋಳಿಗೆ ಬಂದದ್ದೇನು"
- " ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ"
- " ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು"
- " ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು"
- " ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ"
- " ತಿಣಕಿದ ಮುಳ್ಳಿನಿಂದ ಮುಳ್ಳು ತೆಗೆ,"
- " ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು"
- " ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು."
- " ತಿಪ್ಪಯ್ಯಗೆ ಸೂಜಿ ಮೇಲು ಕಳ್ಳಗೆ ಬಾಯಿ ಮೇಲು"
- " ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ"
- " ತಿಪ್ಪೇ ಮೇಲಣ ಅರಿವೆಯಾದರೂ ಕಾಲಿಗೆ ಕಟ್ಟಿದರೆ ಬಿರುದು"
- " ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?"
- " ತಿಪ್ಪೇ ಮೇಲೇ ಮುಪ್ಪಾದ ಕುಂಬಾರ"
- " ತಿಪ್ಪೇ ಮ್ಯಾಲೆ ಮಲಗಿ ಉಪ್ಪರಿಗೆ ಕನಸು ಕಂಡ ಹಾಗೆ"
- " ತಿರಿಚಿನಾಪಳ್ಳಿಗೆ ತಿರಿದುಂಬೊದಕ್ಕೆ ಇಲ್ಲಿಂದ ಕೈ ಸವರಿಸಬೇಕೆ"
- " ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ"
- " ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?"
- " ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೊಜನ ಸಿಕ್ಕಿದರೆ ಬಿಡಲೊಲ್ಲ"
- " ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?"
- " ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು"
- " ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ"
- " ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ"
- " ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ ತಿರುಪಿನಂತೆ ಇರಬೇಕು"
- " ತಿಳಿದವ ತಿರುಳು ತಿಂದರೂ ಮರುಳು ಹೋಗಲಿಲ್ಲ"
- " ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!"
- " ತುಂಟ ಮಂಟಪಕ್ಕೋದರೂ ತುಂಟತನ ಬಿಡಲಿಲ್ಲ"
- " ತುಂಬಿದ ಕೊಡ ತುಳುಕುವುದಿಲ್ಲ"
- " ತುಂಬಿದ ಕೊಡ ತುಳುಕುವುದಿಲ್ಲ."
- " ತುಂಬಿದ ಕೊಡ ತುಳುಕೋದಿಲ್ಲ"
- " ತುಂಬಿದ ಕೊಡ, ತುಳುಕೋದಿಲ್ಲ"
- " ತುಂಬೆ ಗಿಡಕ್ಕೆ ಏಣಿ ಹಾಕಿದಂತೆ"
- " ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು"
- " ತುಟ್ಟಿಯಾದರೂ ಹೊಟ್ಟೆ ಕೇಳದು"
- " ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ"
- " ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು"
- " ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು"
- " ತುಪ್ಪತೊಗೆ ತಿನ್ನೋರ ರಂಪ ನೋಡು"
- " ತೂಕ ಸರಿಯಿದ್ದರೆ ವ್ಯಾಪಾರ"
- " ತೂತು ಗತ್ತಲೇಲಿ ತಾತನ ಮದುವೆ"
- " ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ"
- " ತೆನೆತೆನೆಗೂಡಿದರೆ ಬಳ್ಳ ಎಲ್ಲಾ ಜಾಣ; ತುಸ ಕೋಣ"
- " ತೇಗಿ ತೇಗಿ ಬೀಗಿ ಬಿದ್ದ"
- " ತೇಗಿ ತೇಗಿ ಬೀಗಿ ಬಿದ್ದ ತಾಮ್ರದ ನಾಣ್ಯ"
- " ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು"
- " ತೇರಾದ ಮೇಲೆ ಜಾತ್ರೆ ಸೇರಿತು"
- " ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು"
- " ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು"
- " ತೋಟ ಮಾಡಿದವನಿಗೆ ಕೋಟಲೆಯಿಲ್ಲ"
- " ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು"
- " ತೋಟದ ಬೇಲಿಯನ್ನು ದಾಟಿ ನೋಡದವರಾರು"
- " ತೋಳ ಬಿದ್ದರೆ ಆಳಿಗೊಂದು ಕಲ್ಲು"
- " ತೋಳ ಹಳ್ಳಕೆ ಬಿದ್ದರೆ ಆಳಿಗೊಂದು ಕಲ್ಲು"
- " ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು"
- " ದಂಡಂ ದಶಗುಣಂ ಭವೇತ್"
- " ದಂಡಿನಲ್ಲಿ ಸೋದರಮಾವನೆ"
- " ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು"
- " ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ"
- " ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ"
- " ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ."
- " ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ"
- " ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ."
- " ದನ ತಿನ್ನುವವನಿಗೆ ಗೊಬ್ಬರದ ಆಣೆ"
- " ದನಿಯಿದ್ದವರೂ ಅತ್ತರೂ ಚಂದ ನಕ್ಕರೂ ಚಂದ"
- " ದಯವಿಲ್ಲದ ಧರ್ಮವಿಲ್ಲ"
- " ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ"
- " ದಾಕ್ಷಿಣ್ಯಕ್ಕೆ ಬಸಿರಾಗಿ ಹೆರೋಕ್ಕೆ ಜಾಗವಿಲ್ಲ"
- " ದಾಕ್ಷಿಣ್ಯಕ್ಕೆ ಬಸಿರಾದರೆ ಹಡೆಯೋದು ಕಷ್ಟ"
- " ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ"
- " ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ"
- " ದಾನೆ ದಾನೆ ಪೆ ಲಿಖಾ ಹೋತಾ ಹೈ ಖಾನೆವಾಲೋಂಕ ನಾಮ್"
- " ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ"
- " ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು"
- " ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ"
- " ದಿನಾ ಸಾಯೋರಿಗೆ ಅಳೋರ್ ಯಾರು?"
- " ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು?"
- " ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ"
- " ದೀಪದ ಕೆಳಗೆ ಯಾವತ್ತೂ ಕತ್ತಲೇ"
- " ದುಡಿದದ್ದು ಉಂಡೆಯೋ ಪಡೆದದ್ದು ಉಂಡೆಯೋ"
- " ದುಡಿಮೆಯೇ ದುಡ್ಡಿನ ತಾಯಿ"
- " ದುಡಿಮೆಯೇ ದೇವರು"
- " ದುಡಿಯೋ ತನಕ ಮಡದಿ"
- " ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?"
- " ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ"
- " ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ."
- " ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?"
- " ದುಡ್ಡಿದ್ದವನೇ ದೊಡ್ಡಪ್ಪ"
- " ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ"
- " ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ"
- " ದುರುಳನಿಂದಲೇ ದುರುಳುತನ"
- " ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ"
- " ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು"
- " ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು."
- " ದುಷ್ಟರಿಂದ ದೂರವಿರು"
- " ದೂಫ ಹಾಕಿದರೆ ಪಾಪ ಹೋದೀತೇ"
- " ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ"
- " ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ದೂರದಿಂದ ನೋಡಿದಾಗ ಯಾವುದೇ ವಸ್ತುವಿನ ಅಥವ ಸನ್ನಿವೇಶದ ಅರ್ಥವಾಗುವುದಿಲ್ಲ ದೂರದಿಂದ ನೋಡಿದರೆ ಬೆಟ್ಟ ನುಣ್ಣಗೆ , ಸಮತಟ್ಟಾಗಿರುವಂತೆ ಕಾಣುತ್ತದೆ ಆದರೆ ಹತ್ತಿರ ಹೋಗಿ ನೋಡಿದಾಗಲೆ ಅದರಲ್ಲಿರುವ ಗುಡ್ಡಗಳು, ಮರಗಿಡಗಳು, ಮುಳ್ಳುಗಳು ಎಲ್ಲ ಕಣ್ಣಿಗೆ ಕಾಣುವುದು ಹಾಗೇ ಸಮಾಜದಲ್ಲಿ ನಮ್ಮ ಸುತ್ತ ಮುತ್ತ ಇರುವವರು, ನಮ್ಮ ನೆಂಟರಿಷ್ಟರು ಹಸನ್ಮುಖರಾಗಿ ಇರುವುದನ್ನು ನೋಡಿ ಅವರಿಗೆ ಯಾವುದೇ ಕಷ್ಟ್ಗಗಳಿಲ್ಲ, ಬರಿ ಸುಖ ಸಂತೋಷಗಳೆ ಎಂದು ಯೋಚಿಸುವುದು ಸರಿಯಲ್ಲ ಏಕೆಂದರೆ ಅವರಿಗಿರುವ ಕಷ್ಟ ನಮಗೆ ಗೊತ್ತಿರುವುದಿಲ್ಲಆದ್ದರಿಂದ ತನಗೆ ಬಂದ ಕಷ್ಟಗಲನ್ನು ನಗುನಗುತ್ತ ಎದುರಿಸಬೇಕು, ಪ್ರಪಂಚದಲ್ಲಿ ಎಲ್ಲರಿಗು ಕಷ್ಟಬರುತ್ತದೆ ಎಂಬ ಅಂಶವನ್ನು ನೆನಪಿನಲ್ಲಿಡಬೇಕುಅದು ಬಿಟ್ಟು ತನಗೇ ಎಲ್ಲ ಕಷ್ಟಗಳನ್ನು ಕೊಟ್ಟಿದ್ದಾನೆ ಎಂದು ಯೋಚಿಸುವುದು ತಪ್ಪು ಎಂದು ಈ ಗಾದೆ ಹೇಳುತ್ತದೆ"
- " ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು"
- " ದೇವನೊಬ್ಬ ನಾಮ ಹಲವು"
- " ದೇವರನ್ನು ಬಯ್ಯುವವರು ಅರ್ಚಕನನ್ನು ಬಿಟ್ಟಾರೆ?"
- " ದೇವರಿಗಿಂತ ಕಾಣೋ ಭೂತಾನೇ ವಾಸಿ"
- " ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ"
- " ದೇವರು ಒಲಿದರೂ ಪೂಜಾರಿ ಒಲಿಯೊಲ್ಲ."
- " ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ."
- " ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ"
- " ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; ... ಬಿಡಬೇಡ"
- " ದೇಶ ತಿರುಗಬೇಕು, ಭಾಷೆ ಕಲಿಯಬೇಕು"
- " ದೇಶ ಸುತ್ತಿ ನೋಡು ;ಕೋಶ ವೋದಿ ನೋಡು"
- " ದೇಶ ಸುತ್ತು ; ಕೋಶ ಓದು."
- " ದೇಹಕ್ಕೆ ಮುಪ್ಪಾದರೇನಾಯ್ತು, ಅಧ್ಯಯನಕ್ಕೆ ಮುಪ್ಪಿದೆಯೇ?"
- " ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು"
- " ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ"
- " ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ"
- " ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ."
- " ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ"
- " ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ"
- " ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ"
- " ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು"
- " ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು"
- " ಧರ್ಮಕ್ಕೆ ದುಪ್ಪಟಿ ಕೊಟ್ಟರೆ; ಹಿತ್ತಲಿಗೆ ಹೋಗಿ ಮೊಳ ಹಾಕಿದರಂತೆ"
- " ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ"
- " ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?"
- " ಧೈರ್ಯವಿದ್ದವನಿಗೆ ದೈವವೂ ಅನುಕೂಲ"
- " ಧೈರ್ಯವಿದ್ದವನಿಗೆ ದೈವವೂ ಅನುಕೂಲ."
- " ನ ರಹೇಗ ಬಾನ್ಸ್ , ನ ರಹೇಗ ಬಾಸುರಿ"
- " ನಕ್ಕು ನುಡಿದವರು ಕಡೆಗೆ ಅಡವಿಯಲಿಕ್ಕಿ ಬರುವರು"
- " ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು"
- " ನಗುವೇ ಆರೋಗ್ಯದ ಗುಟ್ಟು"
- " ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ"
- " ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ"
- " ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ"
- " ನಡೆದಷ್ಟು ನೆಲ, ಪಡೆದಷ್ಟು ಫಲ"
- " ನಡೆವರು ಎಡವದೇ ಕುಳಿತವರು ಎಡವುವರೇ"
- " ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ"
- " ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ"
- " ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ"
- " ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು"
- " ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ"
- " ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?"
- " ನಮ್ಮ ದೇವರ ಸತ್ಯ ನಮಗೆ ಗೊತ್ತು."
- " ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ"
- " ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು"
- " ನಯಶಾಲಿ ಆದವನು ಜಯಶಾಲಿ ಆದಾನು"
- " ನರಗುಂದಕ್ಕೆ ಹೊದರೆ ಕುರು ತಪ್ಪೀತೆ?"
- " ನರಿ ಕೂಗು ಗಿರಿ ಮುಟ್ಟುತ್ತದೆಯೆ ?"
- " ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ"
- " ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ"
- " ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು"
- " ನವಿಲು ಜಾಗರವಾಡ್ತು ಅಂತ; ಕೆಂಬೂತ ಪುಕ್ಕ ತರೆದುಕೊಂಡಿತಂತೆ"
- " ನಾ ಬಡವ ವಾಲಗ ಸಾವಕಾಶ ಊದು ಅಂದಂತೆ"
- " ನಾಚಿಕೆ ಬಿಟ್ಟವ ಊರಿಗೇ ದೊಡ್ಡವ "
- " ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು"
- " ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ"
- " ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು"
- " ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು."
- " ನಾನು ನನ್ನ ಕಣ್ಣೊಳಗಿನ ಬೊಂಬೆ"
- " ನಾಮ ಎಚ್ಚಾಯ್ತು ನೀರ್ತತ್ತಾನಿ; ನೀರ್ ಎಚ್ಚಾಯ್ತು ನಾಮ ತತ್ತಾನಿ"
- " ನಾಮವಿದ್ದವನಿಗೆ ಕಾಮ ಕಡಿಮೆಯೇ?"
- " ನಾಯಿ ಬಾಲ ಡೊಂಕು"
- " ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ"
- " ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?"
- " ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?"
- " ನಾಯಿ ಬೊಗಳಿದರೆ ದೇವಲೋಕ ಹಾಳೆ"
- " ನಾಯಿ ಬೊಗಳಿದರೆ ದೇವಲೋಕ ಹಾಳೇನು"
- " ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ"
- " ನಾಯಿ ಹೆಸರು'ಸಂಪಿಗೆ'ಅಂತ"
- " ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ"
- " ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?"
- " ನಾಯಿಗೆ ಹೊತ್ತಿಲ್ಲ; ನಿಲ್ಲಕ್ಕೆ ನೆಲೆಯಿಲ್ಲ"
- " ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು."
- " ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?"
- " ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ ... ಕಂಡು ಇಳಿಬಿತ್ತು"
- " ನಾಯ್ ಹೆಣಾನ ಹತ್ತಿ ತಿನ್ನುವಂತೆ"
- " ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ"
- " ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ."
- " ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು"
- " ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು."
- " ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ"
- " ನಿಜ ಆಡಿದರೆ ನಿಷ್ಠೂರ"
- " ನಿಜ ಆಡಿದರೆ ನಿಷ್ಠೂರ ಇದ್ದದ್ದು ಹೋಯಿತು"
- " ನಿದ್ದೆ ಗೈಯೋನ ಹೊತ್ತು"
- " ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ"
- " ನಿನ್ನ ಹಿತು(ಮುದ್ದು), ನನ್ನ ತಿಂತು"
- " ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ"
- " ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ."
- " ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು"
- " ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು."
- " ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ"
- " ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ."
- " ನಿನ್ನಿಂದ ಆದ ಪಾಪ, ಅದೇ ನಿನಗೆ ಶಾಪ"
- " ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ"
- " ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು"
- " ನಿಷ್ಠೆ ಇಲ್ಲದವನಿಗೆ ದೈವ ಬಟ್ಟ ಬಯಲು"
- " ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ"
- " ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ"
- " ನೀ ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ"
- " ನೀಡುವರ ಬೇಡ ಅನ್ನೋದ್ ಕಷ್ಟ"
- " ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ"
- " ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ."
- " ನೀರ ಕಡಿದರೆ ಬೆಣ್ಣೆ ಬಂದಾದೇನೆ"
- " ನೀರಿನಲ್ಲಿ ಹೋಮ ಮಾಡಿದಂತೆ"
- " ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ"
- " ನೀರಿಳಿಯದ ಗಂಟಲೊಳ್ ಕಡುಬು ತುರುಕಿದಂತಾಯ್ತು (ಮುದ್ದಣ)"
- " ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ"
- " ನೀರೆ ನಿನ್ನ ಮಾತು ನಿಜವೇನೆ"
- " ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು"
- " ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಕಾದಡಿತು"
- " ನುಂಗ್ತು ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು"
- " ನೂಕ್ಮಣೆ, ಯಾಕ್ಮಣೆ ತೇಗಿ ತೇಗಿ ಬೀಗಿ ಬಿದ್ದ"
- " ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !"
- " ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ."
- " ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ"
- " ನೂಲಿನಂತೆ ಸೀರೆ, ಬೀಜದಂತೆ ವೃಕ್ಷ"
- " ನೂಲಿನಂತೆ ಸೀರೆ; ತಾಯಿಯಂತೆ ಮಗಳು"
- " ನೆಂಟ ನೆರವಲ್ಲ ಕುಂಟ ಜೊತೆಯಲ್ಲ"
- " ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು"
- " ನೆಂಟರಿಗೆ ದೂರ ; ನೀರಿಗೆ ಹತ್ತಿರ"
- " ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ"
- " ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ"
- " ನೆಚ್ಚಿನೆಮ್ಮೆ ಕೋಣನನ್ನೀಯಿತು"
- " ನೆತ್ತರು ಉಕ್ಕಿದರೆ ಜೀವ ತೊಡಕೀತು"
- " ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ"
- " ನೆರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ"
- " ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು"
- " ನೆಲಕ್ಕೆ ಬಿದ್ದ್ರೂ ಮೀಸೆ ಮಣ್ಣಾಗಿಲ್ಲ"
- " ನೇಮ ಉಳ್ಳವನ ಕಂಡರೆ ಯಮನಿಗೂ ಭಯ"
- " ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು"
- " ನೊಣ ತಿಂದು ವ್ರತ ಕೆಡಿಸಿಕೊಂಡರು"
- " ನೋಡಿ ನಡೆದವನಿಗೆ ಕೇಡಿಲ್ಲ"
- " ನೋಡಿ ನಡೆದವರಿಗೆ ಕೇಡಿಲ್ಲ"
- " ನೋಡಿ ನಡೆದವರಿಗೆ ಕೇಡಿಲ್ಲ."
- " ನೋಡಿ ನಡೆದಾಗ ಎಡವೋದು ತಪ್ಪುತ್ತೆ"
- " ಪಂಗಡವಾದವ ಸಂಗಡ ಬಂದಾನೆ?"
- " ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?"
- " ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ"
- " ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ"
- " ಪಟ್ಟ ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು"
- " ಪಡಿತಿಂದು ಗುಡಿಯಲ್ಲಿ ಉರುಳಾಡಿದ"
- " ಪಡುವಣ ಮನೆಗೆ ಮೂಡಣ ದೀಪ"
- " ಪದವಿ ಬಂದ ಬಳಿಕ ಮದವೂ ಬರತಕ್ಕದ್ದೆ"
- " ಪದವೂ ಮುಗಿಯಿತು, ತಂತಿಯೂ ಹರಿಯಿತು"
- " ಪರದಾನಿ ಹೂಸು ಕುಡಿದ"
- " ಪರದಾನಿ ಹೂಸು ಕುಡಿದ ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು"
- " ಪರರ ಹಂಗಿಸಿ ಮಂಗ ಅನಿಸಿಕೊಂಡ"
- " ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ"
- " ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ"
- " ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು"
- " ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು"
- " ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ"
- " ಪಾಪ ಅಂದ್ರೆ ಕರ್ಮ ಬರ್ತದೆ"
- " ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು"
- " ಪಾಪಿ ಚಿರಾಯು"
- " ಪಾಪಿ ಧನ ಪ್ರಾಯಶ್ಚಿತ್ತಕ್ಕೆ"
- " ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು"
- " ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು"
- " ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು"
- " ಪಾಪಿ ಹೊಟ್ಟೇಲಿ ಪುಣ್ಯವಂತರು ತೊಟ್ಟಿಲಲ್ಲಿ"
- " ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ"
- " ಪಾಲಿಗೆ ಬಂದದ್ದು ಪಂಚಾಮೃತ"
- " ಪಾಲಿಗೆ ಬಂದದ್ದೆ ಪರಮಾನ್ನ."
- " ಪಿಶಾಚಿ ಬಿಟ್ಟರೂ ನಿಶಾಚರ ಬಿಡ"
- " ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ"
- " ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ."
- " ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು"
- " ಪುಣ್ಯದ ಪಾಲು ನನಗಿರಲಿ ಅಂದ"
- " ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ"
- " ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?"
- " ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ"
- " ಪುಸ್ತಕಂ ವನಿತಾ ವಿತ್ತಂ ಪರಹಸ್ತೇ ಗತಂ ಗತಂ"
- " ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ"
- " ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ"
- " ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ"
- " ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ."
- " ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು"
- " ಪ್ರತ್ಯಕ್ಷ ನೋಡಿದರೂ ಪ್ರಮಾಣಿಸಿ ನೋಡು"
- " ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ,"
- " ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು"
- " ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು"
- " ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು."
- " ಪ್ರಸ್ತಕ್ಕಿಲ್ಲದ ಮಾತು ಹತ್ತು ಸಾವಿರವಿದ್ದೇನು"
- " ಪ್ರಾಮಾಣಿಕತೆಯಿಂದಲೇ ಪಾರಮಾರ್ಥ"
- " ಪ್ರಾಮಾಣಿಕತೆಯಿಂದಲೇ ಪಾರಮಾರ್ಥ."
- " ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು"
- " ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು"
- " ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು"
- " ಬಂಗಾರಕ್ಕೆ ಕುಂದಣವಿಟ್ಟಂತೆ ವಜ್ರಕ್ಕೆ ಸಾಣಿ ಹಿಡಿದಂತೆ"
- " ಬಂಟರ ಅಬ್ಬರ ಸೇವಿನ ಗೊಬ್ಬರ"
- " ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ"
- " ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ"
- " ಬಂದ ದಾರಿಗೆ ಸುಂಕವಿಲ್ಲ"
- " ಬಂದದ್ದೆಲ್ಲಾ ಬರಲಿ ಗೋವಿಂದನ ದಯೆಯೊಂದಿರಲಿ"
- " ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ"
- " ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು"
- " ಬಗಳೊ ನಾಯಿ ಬಡಿಯಬೇಡ ತಿಗುಳಗೆ"
- " ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ"
- " ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು"
- " ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ 'ಭುಸ್' ಅಂತಂತೆ"
- " ಬಡವ ನೀ ಮಡಗಿದ ಹಾಗಿರು"
- " ಬಡವ ನೀ ಸೆಣಸಿ ಕೆಡಬೇಡ"
- " ಬಡವನ ಕೋಪ ದವಡೆಗೆ ಮೂಲ"
- " ಬಡವನ ಸಿಟ್ಟು ದವಡೆಗೆ ಮೂಲ"
- " ಬಡವನಿಗೆ ಉಳಿದಷ್ಟೆ ಅಭಿಮಾನ"
- " ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?"
- " ಬಡವರ ಮನೆ ಊಟ ಚೆಂದ ;ಸವ್ಕ್ರಾರ್ರ ಮನೆ ನೋಟ ಚೆಂದ"
- " ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ"
- " ಬಡವರ ಮಾತು ನುಡಿ ನುಡಿಗೂ ಬೇಸರ"
- " ಬಡವೆ ಸೀರೆ ಉಡದೆ ಮಾಸಿತು"
- " ಬಡ್ಡಿ ಬಾಯಿಗಂಜ್ತೀಯೋ, ದೊಡ್ಡೆತ್ತಿನ ಕೋಡಿಗಂಜ್ತೀಯೋ"
- " ಬಣ ಬಣ ಬೆಳಕು ಹರಿದಾಗ ಕತ್ತಲು"
- " ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು"
- " ಬಯಕೆಗೆ ಬಡವರಿಲ್ಲ"
- " ಬಯಸಿ ಬಯಸಿ ಬಾವನ ಹತ್ರ ಹೋದರೆ ಕಿಸಗಾಲು ಮಗ ಹುಟ್ಟಿದನಂತೆ"
- " ಬರ ಹ್ಯಾಗೆ ಹಿಂಗೀತು"
- " ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು"
- " ಬರಿಗೈಯವರ ಬಡಿವಾರ ಬಹಳ"
- " ಬರಿಗೈಯವರ ಬಡಿವಾರ ಬಹಳ."
- " ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ"
- " ಬರೀ ಮಾತಾಡಿ ಬೈಯ್ಯಿಸಿಕೊಂಡ"
- " ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ"
- " ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು"
- " ಬಲ್ಲವನೇ ಬಲ್ಲ ಬೆಲ್ಲದ ರುಚಿಯ"
- " ಬಲ್ಲವರಿಗೆ ಅದೇ ಸಮ್ಮತ"
- " ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು"
- " ಬಲ್ಲಿದವನಿಗೆ ಕಬ್ಬು"
- " ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ"
- " ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ"
- " ಬಸುರಲ್ಲಿ ಬಂದ ಕೂಸು ಮುದ್ದು"
- " ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ"
- " ಬಳ್ಳಿಗೆ ಕಾಯಿ ಭಾರವೇ"
- " ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು"
- " ಬಾಡಿಗೆ ಎತ್ತೆಂದು ಬಡಿದು ಬಡಿದು ಹೂಡಬೇಕೆ"
- " ಬಾಣಲೆಯಿಂದ ಒಲೆಗೆ ಬಿದ್ದಂತೆ"
- " ಬಾಣಲೆಯಿಂದ ಬೆಂಕಿಗೆ"
- " ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ"
- " ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ."
- " ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ"
- " ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ."
- " ಬಾಯಲ್ಲಿ ಬೆಲ್ಲ ಕರುಳು ಕತ್ತರಿ"
- " ಬಾಯಿ ಬಂಗಾರ, ಮನ ಅಂಗಾರ"
- " ಬಾಯಿ ಬಿಟ್ಟರೆ ಬಣ್ಣಗೇಡು"
- " ಬಾಯಿದ್ದೋರು ಬರಗಾಲದಲ್ಲೂ ಬದುಕಿದರು"
- " ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ"
- " ಬಾಯಿಯಿದ್ದ ಮಗ ಬದುಕುವನು"
- " ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು"
- " ಬಾಲ ಸುಟ್ಟ ಬೆಕ್ಕಿನ ಹಾಗೆ"
- " ಬಾಲೇರ ಮನಸ್ಸು ನೆಲೆಯಿಲ್ಲ"
- " ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ"
- " ಬಾವಿ ತೋಡದೆ ನೀರು ಸಿಗದು, ಪ್ರಯತ್ನ ಮಾಡದೆ ಫಲ ಸಿಗದು"
- " ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ"
- " ಬಾಳಲಾರದವ ಪಾಠ ಕಲಿತ"
- " ಬಾಳಿ ಬದುಕಿದವ ಕಲಿ,"
- " ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ"
- " ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ"
- " ಬಾಳೆ ಬೆಳೆದವ ಬಾಳಿಯಾನು"
- " ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು"
- " ಬಾಳೆಗೊಂದು ಗೊನೆ, ಬಾಳಿಗೊಂದು ಮಾತು"
- " ಬಿಟ್ಟವರ ಕಂಡು ಬಿಟ್ಟು ಬಾಳುಗೆಟ್ಟ"
- " ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ."
- " ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು"
- " ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು."
- " ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು"
- " ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು."
- " ಬಿದ್ದರೂ ಮೀಸೆ ಮಣ್ಣಾಗಲಿಲ್ಲ"
- " ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು"
- " ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು"
- " ಬಿರಿಯ ಉನ್ದ ಬ್ರಹ್ಮನ ಬಿಕ್ಶೆ ಬೆದಿದನನ್ಥೆ"
- " ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ"
- " ಬಿರಿಯಾಗಿ ಉಂಡ ಬ್ರಾಹ್ಮಣ ಭಿಕ್ಷೆಬೇಡಿದನಂತೆ"
- " ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ"
- " ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು"
- " ಬಿಳಿ ಆನೆ ಸಾಕಿದ ಹಾಗೆ"
- " ಬೀಜ ಸಣ್ಣದಾದರೆ ಮರ ಸಣ್ಣದೋ"
- " ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ"
- " ಬೀದಿಲಿ ಹೋಗೋ ಮಾರಿ ಮನೇಗ್ಹೋಗು ಬಂದ್ಹೋಗು ಅಂದ್ರಂತೆ"
- " ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು"
- " ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ"
- " ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು"
- " ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ"
- " ಬೀಳು ಭೂಮಿಗೆ ಬೀಜ ದಂಡ"
- " ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ"
- " ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ."
- " ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು"
- " ಬುದ್ಧಿ ಭೂಮಿ ಆಳು ಅಂದ್ರೆ ಅದೃಷ್ಟ ಕತ್ತೆ ಕಾಯಿ ಅನ್ನುತ್ತಂತೆ"
- " ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!"
- " ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ"
- " ಬೆಂಕಿ ಇಲ್ಲದೆ ಹೊಗೆ ಏಳಲ್ಲ"
- " ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ"
- " ಬೆಂಗಳೂರಿಗೆ ಬಂದೋನೇ ಬಹದ್ದೂರ"
- " ಬೆಂದ ಮನೆಗೆ ಹಿರಿದದ್ದೇ ಲಾಭ"
- " ಬೆಂದ ಮನೇಲಿ ಹಿರಿದದ್ದೇ ಲಾಭ"
- " ಬೆಕ್ಕಿಗೆ ಚೆಲ್ಲತ ಇಲಿಗೆ ಪ್ರನ ಸನ್ಕತ"
- " ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ."
- " ಬೆಕ್ಕಿಗೆ ಚೆಲ್ಲಾಟ,ಇಲಿಗೆ ಪ್ರಾಣ ಸಂಕಟ"
- " ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ"
- " ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ"
- " ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ"
- " ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ"
- " ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?"
- " ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು"
- " ಬೆಕ್ಕು ಸನ್ಯಾಸ ತೆಗೆದುಕೊಂಡ ಹಾಗೆ"
- " ಬೆಟ್ಟ ಅಗೆದು ಇಲಿ ಹಿಡಿದಂತೆ"
- " ಬೆಟ್ಟ ಮಹಮ್ಮದನ ಬಳಿ ಬರಲ್ಲ, ಮಹಮ್ಮದನೇ ಬೆಟ್ಟದ ಬಳಿ ಹೋಗಬೇಕು"
- " ಬೆಣ್ಣೆಯೊಳಗಿನ ಕೂದಲು ತೆಗೆದಂತೆ"
- " ಬೆಣ್ಣೇಲಿ ಕೂದಲು ತೆಗೆದ ಹಾಗೆ"
- " ಬೆನ್ನ ಹಿಂದೆ ಉರಿಯೋ ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ"
- " ಬೆನ್ನಹಿಂದೆ ಬಿದ್ದು (ಓಡಿ)ಬನ್ನ"
- " ಬೆರಳು ತೋರಿದರೆ ಹಸ್ತ ನುಂಗಿದರಂತೆ"
- " ಬೆರಳು ತೋರಿಸಿದರೆ ಹಸ್ತ ನುಂಗಿದರಂತೆ"
- " ಬೆರಳು ತೋರುದ್ರೆ ಅಂಗೈನೇ ನುಂಗಿದಂತೆ"
- " ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ"
- " ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ."
- " ಬೆಲ್ಲಗಿರುವುದೆಲ್ಲ ಹಾಲಲ್ಲ"
- " ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ"
- " ಬೆಲ್ಲದವನು ಬಾಯಿ ಬಡಿದುಕೊಂಡು ಅತ್ತರೆ; ತೆಂಗಿನಕಾಯಿಯವನು ತಲೆ ಚಚ್ಚಿಕೊಂದು ಅತ್ತನಂತೆ"
- " ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು"
- " ಬೆಳಗಾದ್ರೆ ತಿಳಿಯುತ್ತೆ ಅಳಿಯನ ಕುರುಡು"
- " ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ"
- " ಬೆಳೆಯುವ ಪೈರು ಮೊಳಕೆಯಲ್ಲಿ"
- " ಬೆಳ್ಳಗಿರೋದೆಲ್ಲ ಹಾಲಲ್ಲ"
- " ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ."
- " ಬೆಳ್ಳಗಿರೋದೆಲ್ಲಾ ಹಾಲಲ್ಲ ಹೊಳೆಯುವುದೆಲ್ಲಾ ಚಿನ್ನವಲ್ಲ"
- " ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ"
- " ಬೇಕಾದ ಮಾತು, ಬೆಲ್ಲಕ್ಕಿಂತ ಸವಿ"
- " ಬೇಕೆಂಬುದು ಬಾಳು ಸಾಕೆಂಬುದು ಸಾವು"
- " ಬೇರೆ ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ;"
- " ಬೇಲಿನೆ ಎದ್ದು ಹೊಲ ಮೇಯಿತಂತೆ"
- " ಬೇಲಿಯೇ ಎದ್ದು ಹೊಲ ಮೇದಂತೆ"
- " ಬೇಲಿಯೇ ಎದ್ದು ಹೊಲ ಮೇಯ್ದಂತೆ"
- " ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು"
- " ಬೇಸರವಿರಬಾರದು, ಅವಸರ ಮಾಡಬಾರದು"
- " ಬೇಸರವಿರಬಾರದು, ಅವಸರ ಮಾಡಬಾರದು. ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು."
- " ಬೈದು ಹೇಳಿದವರು ಬದುಕಕ್ಕೆ ಹೇಳಿದರು"
- " ಬೊಗಳುವ ನಾಯಿ ಕಚ್ಚುವುದಿಲ್ಲ"
- " ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು"
- " ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ"
- " ಭಂಗಿ ರಸ ನೆತ್ತಿಗೇರಿ ಬಿಂಗಿಯಂತಾದ ರಸವಳ್ಳಿ"
- " ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ"
- " ಭರಣಿ ಮಳೆ ಧರಣಿ ಬೆಳೆ"
- " ಭಾರವಾದ ಪಾಪಕ್ಕೆ ಘೋರವಾದ ನರಕ"
- " ಭಾವಿಗೆ ಬಿದ್ರೆ, ಸಾಲಿಗ್ರಾಮ ಸಿಗ್ತಂತೆ"
- " ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು"
- " ಭಾಷೆ ಕೊಟ್ಟವನು ಪೋಷಣೆ ಮಾಡನೇ?"
- " ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ"
- " ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?"
- " ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು"
- " ಭೂಮಿಯಿಂದ ಆಕಾಶಕ್ಕೆ ಏಣಿಯನ್ನು ಇಟ್ಟ"
- " ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ"
- " ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು."
- " ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ"
- " ಮಂಗನ ಕೈಗೆ ಮಾಣಿಕ್ಯ ಕೊಟ್ಟಂತೆ"
- " ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ"
- " ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ"
- " ಮಂತ್ರ ಸ್ವಲ್ಪ, ಉಗುಳೇ ಬಹಳ"
- " ಮಂತ್ರಕ್ಕಿಂತ ಉಗುಳೆ ಜಾಸ್ತಿ"
- " ಮಂತ್ರಕ್ಕಿಂತ ಉಗುಳೇ ಜಾಸ್ತಿ"
- " ಮಂತ್ರಕ್ಕಿಂತ ಉಗುಳೇ ಹೆಚ್ಚು"
- " ಮಂತ್ರಕ್ಕಿಂತ ಉಗುಳೇ ಹೆಚ್ಚು."
- " ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?"
- " ಮಂತ್ರಿ ಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ"
- " ಮಂದಾಳಿಗೊಂದು ಮುಂದಾಳು ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ"
- " ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು"
- " ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ"
- " ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು"
- " ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು."
- " ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ"
- " ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ) '"
- " ಮಗ ನೊಣ ಝಾಡಿಸಿದ"
- " ಮಗ ಸಣ್ಣವನಾದರೂ, ಮಾತು ಸಣ್ಣದಲ್ಲ"
- " ಮಗೂನ ಚಿವುಟೋದು, ತೊಟ್ಟಿಲು ತೂಗೋದು"
- " ಮಘೆ ಮಳೆ ಬಂದಷ್ಟೂ ಒಳ್ಳೇದು,"
- " ಮಜ್ಜಿಗೆಹುಳಿಗೆ ಒಗ್ಗರಣೆ ಹಾಕುವ ಹೊತ್ತಿಗೆ ಮೂರು ಮನಸ್ಸು"
- " ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು"
- " ಮದುವೆ ಮಡಿನೋಡು ಮನೆ ಕಟ್ಟಿ ನೋಡು"
- " ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು"
- " ಮದುವೆ ಸಂಭ್ರಮದಲ್ಲಿ ತಾಳಿ ಕಟ್ಟುವುದನ್ನೇ ಮರೆತಂತೆ"
- " ಮದುವೆ ಸಾಲ ಮಸಣಾದವರೆಗೂ"
- " ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ"
- " ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ"
- " ಮದುವೆಯಾಗೋ ಬ್ರಾಹ್ಮಣ ಅಂದರೆ ನೀನೇ ನನ್ನ ಹೆಂಡ್ರು ಅಂದಂತೆ"
- " ಮದ್ದಿನ ಗುಣದಿಂದ ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ"
- " ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು"
- " ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ"
- " ಮನಸಿದ್ದರೆ ಮಾರ್ಗ."
- " ಮನಸ್ಸನ್ನು ನಿಯಂತ್ರಿಸಿ ಜೀವನ ಸಾಗಿಸಿ"
- " ಮನಸ್ಸಿದ್ದರೆ ಮಾರ್ಗ"
- " ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ"
- " ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ"
- " ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ."
- " ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!"
- " ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು"
- " ಮನೆ ಕದ ಕೊಟ್ಟು ಬೆಳಗೂ ನಾಯಿ ಹೊಡೆದರಂತೆ"
- " ಮನೆ ಗೆದ್ದು ಮಾರು ಗೆಲ್ಲು"
- " ಮನೆ ಚಿನ್ನ ಹಿತ್ತಾಳೆ, ಅಕ್ಕಸಾಲೆನ ದೂರಿದರಂತೆ"
- " ಮನೆ ತುಂಬ ಮುತ್ತಿದ್ದರೆ ...ಗೂ ಪೋಣಿಸಿಕೊಂಡರಂತೆ"
- " ಮನೆ ದೇವರನ್ನ ಮೂಲೆಗಿಟ್ಟು ಬೆಟ್ಟದ ದೇವರಿಗೆ ಬುತ್ತಿ ಹೊತ್ತಂತೆ."
- " ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು"
- " ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ"
- " ಮನೆ ಮಗ ಉಂಡಷ್ಟೂ ಒಳ್ಳೇದು"
- " ಮನೆ ಹೆಂಡತಿ ಕಾಸ್ತಾರ ಆಪತ್ತಿಗಾದವನೇ ನೆಂಟ"
- " ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ"
- " ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ"
- " ಮನೆಗೆ ಮಾರಿ ಪರರಿಗೆಉಪಕಾರಿ"
- " ಮನೆಗೆ ಮಾರಿ, ಊರಿಗೆ ಉಪಕಾರಿ."
- " ಮನೆಗೆ ಮಾರಿ, ಪರರಿಗೆ ಉಪಕಾರಿ"
- " ಮನೆಗೆ ಹೋದ್ರೆ ಮಜ್ಜಿಗೆ ಕೊಡದವಳು ಹೇಳೀಕಳುಹಿಸಿದರೆ ಹಾಲು ಕೊಟ್ಟಾಳೆಯೆ?"
- " ಮನೆಗೊಂದು ಮುದಿಕೊರಡು;ಒಲೆಗೊಂದು ಒದೆಕೊರಡು"
- " ಮನೆಮನೆ ಮುದ್ದೆ ಮಾರಿಗುಡಿ ನಿದ್ದೆ"
- " ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?"
- " ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು"
- " ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ"
- " ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು"
- " ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು."
- " ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!"
- " ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು"
- " ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ"
- " ಮನೇಲಿ ಇಲಿ, ಬೀದೀಲಿ ಹುಲಿ"
- " ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ"
- " ಮಮತೆಯ ಮಡಿಲಲ್ಲಿ ತೂಗಬೇಕು, ಮನಸ್ಸೆಂಬ ಬಂಧನದಲ್ಲಿ ಬೀಳಬೇಕು"
- " ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ"
- " ಮರ ನೆಟ್ಟು ಪಾಪವನ್ನು ಕಳೆದುಕೋ"
- " ಮರಗಿಣಿಯ ಕೂಡೆ ಆಡಿ ಅರಗಿಣಿ ಕೇಟ್ಟಿತು"
- " ಮರಣಕ್ಕೆ ಪಾತ್ರಳು ತರಬಲ್ಲವನ ಹೆಂಡತಿ ಅಡಜಾಣೆ (ಅಡಕವಾದ ಜಾಣ್ಮೆ ಉಳ್ಳವಳು) ತರಲಿಲ್ಲ ಬರಲಿಲ್ಲ"
- " ಮರದಂತೆ ಮಕ್ಕಳು"
- " ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ"
- " ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ."
- " ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ"
- " ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ"
- " ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ"
- " ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ"
- " ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ"
- " ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ"
- " ಮಳ್ಳಿ ಮಳ್ಳೀ ಮಂಚಕ್ಕೆ ಎಷ್ಟು ಕಾಲೇ ಅಂದ್ರೆ ಮೂರು ಮತ್ತೊಂದು ಅಂದಳಂತೆ"
- " ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ"
- " ಮಾಘ ಕಾವ್ಯ ಮಗನಿಗೆ ಬೇಡ"
- " ಮಾಟ ಮಾಡಿದೋನ ಮನೆ ಹಾಳು"
- " ಮಾಟ ಮಾಡಿದೋನ ಮನೆ ಹಾಳು."
- " ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ"
- " ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ"
- " ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು"
- " ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು."
- " ಮಾಡಿದ ಕರ್ಮ ಬೆನ್ನಾಡಿ ಬಂತು"
- " ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು"
- " ಮಾಡಿದ ಪಾಪ ದಾನದಿಂದ ಹೋದೀತೆ"
- " ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ"
- " ಮಾಡಿದರೆ ಮನೆ ; ಹೂಡಿದರೆ ಒಲೆ ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ"
- " ಮಾಡಿದುಣ್ಣೊ ಮಾರಾಯ"
- " ಮಾಡಿದೋರ ಪಾಪ ಆಡಿದೋರ ಬಾಯಲ್ಲಿ"
- " ಮಾಡಿದ್ದುಣ್ಣೋ ಮಹರಾಯ"
- " ಮಾಡಿದ್ದುಣ್ಣೋ ಮಾರಾಯ"
- " ಮಾಡಿದ್ದುಣ್ಣೋಮಹರಾಯ"
- " ಮಾಡುವವ ಉತ್ತಮ ಆಡಿ ಮಾಡದವ ಅಧಮ ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ"
- " ಮಾಡುವವರಿದ್ದರೆ ನೋಡು ನನ್ನ ಸಿರಿಯ"
- " ಮಾಡುವವರಿದ್ರೆ ನೋಡು ನನ್ನ ಸಿರಿಯ"
- " ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ"
- " ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ"
- " ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ."
- " ಮಾಣಿಕ್ಯ ಬೇಡಿದರೆ ಇಲ್ಲ ಅನ್ನೋದ್ ಕಷ್ಟ"
- " ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ"
- " ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆ"
- " ಮಾತಿಗೆ ನೆಲೆಯಿಲ್ಲ, ಪ್ರೇಮಕ್ಕೆ ಬೆಲೆಯಿಲ್ಲ"
- " ಮಾತಿಗೆ ಮಾತುಗಳ ಓತು ಸಾಸಿರ ಉಂಟು"
- " ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ"
- " ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ."
- " ಮಾತಿಗೊಂದು ಮಾತು ಬಂತು"
- " ಮಾತಿನ ಬೊಮ್ಮ ತೂತಾದ ಮಡಕೆಯ ಪರಿ"
- " ಮಾತು ಅಂಗಾರ ಮೌನ ಬಂಗಾರ"
- " ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು"
- " ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು"
- " ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು"
- " ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ"
- " ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ"
- " ಮಾತು ಬೆಳ್ಳಿ, ಮೌನ ಬಂಗಾರ"
- " ಮಾತು ಬೆಳ್ಳಿ, ಮೌನ ಬಂಗಾರ."
- " ಮಾತು ಬೆಳ್ಳಿ; ಮೌನ ಬಂಗಾರ"
- " ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು"
- " ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು"
- " ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು."
- " ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು"
- " ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ"
- " ಮಾತೇ ಮುತ್ತು, ಮಾತೇ ಮೃತ್ಯು ಮಾತಿನಿಂದ ಒಬ್ಬರ ಜೀವನವನ್ನು ಸುಂದರವನ್ನಾಗಿ ಮಾಡಬಹುದು ಇಲ್ಲ ಒಬ್ಬರ ಜಿವನ ಹಾಳುಮಾಡಬಹುದು ಆದ್ದರಿಂದ ಮಾತಿನ ಮೇಲೆ ಹಿಡಿತವಿರಬೇಕು"
- " ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ ಹೆಸರಿಗೆ ಹೊನ್ನ ಹೆಗ್ಗಡೆ,"
- " ಮಾನ ಹೋದ ಮೇಲೆ ಮರಣ ಬಂದ ಹಾಗೆ"
- " ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ"
- " ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು ಅಂದನಂತೆ"
- " ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ"
- " ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ್ ಕಣ್ಣು ಕುರಿ ಮ್ಯಾಲೆ."
- " ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ"
- " ಮಾವನು ಇಲ್ಲದ ಮನೆಯೇಕೆ, ಹೆಂಡತಿಯಿಲ್ಲದ ಒಡವೆಯೇಕೆ?"
- " ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು"
- " ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?"
- " ಮಿಂದರೆ ಮೈಯ ಕೊಳೆ ಹೋಯ್ತು"
- " ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ"
- " ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು"
- " ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ"
- " ಮುಕ್ಕು ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ"
- " ಮುಖ ನೋಡಿ ಮಣೆ ಹಾಕು"
- " ಮುಖ ನೋಡಿ ಮನ ತಿಳಿ"
- " ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ"
- " ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು"
- " ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ ಮೊಲ ಎಬ್ಬಿಸಿ ...ಕ್ಕೆ ಕೂತರು"
- " ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು"
- " ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು"
- " ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ."
- " ಮುದಿ ... ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)"
- " ಮುದುಕೀ ನಿನ್ನಾಟ ಮುಂದೈತಿ"
- " ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ"
- " ಮುದ್ದೆ ಉಣ್ತಾ ಮಜ್ಜಿಗೆ ಓಡಾಟ"
- " ಮುರವ ತಾವು ಮಾಡುವುದು ಗಂಧರ್ವರು ಮಾಡಿದರು"
- " ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ"
- " ಮುಸುಕಿನೊಳಗೆ ಗುದ್ದಿಸಿಕೊಂಡಂತೆ ಕದ್ದು ತಿಂದ ಹಣ್ಣು,"
- " ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ"
- " ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು"
- " ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು."
- " ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ"
- " ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು"
- " ಮೂಕವೇದನೆಯು ಸತ್ಯಕ್ಕಿಂತ ಮೇಲು"
- " ಮೂಗಿಗಿಂತ ಮೂಗುತಿ ಭಾರ"
- " ಮೂಗಿರುವ ತನಕ ನೆಗಡಿ ತಪ್ಪಿದ್ದಲ್ಲ"
- " ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು"
- " ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು"
- " ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು"
- " ಮೂರು ವರ್ಷದ ಬುದ್ಧಿ ನೂರು ವರುಷದ ತನಕ"
- " ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ"
- " ಮೂರೂ ಬಿಟ್ಟೋನು, ಊರಿಗೆ ದೊಡ್ಡೋನು"
- " ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು"
- " ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು"
- " ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು"
- " ಮೃತ್ಯು ಬಂದ ಮೇಲೆ ವೈದ್ಯ ಬಂದ"
- " ಮೃತ್ಯು ಬಂದ ಮೇಲೆ ವೈದ್ಯ ಬಂದ."
- " ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ"
- " ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು"
- " ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ"
- " ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ"
- " ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ"
- " ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ"
- " ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ"
- " ಮೊಂಡ ಕೊಡಲಿ ರಟ್ಟೆಗೆ ಮೂಲ"
- " ಮೊಂಡ ಮಾವನಿಗೊಬ್ಬ ಭಂಡ ಅಳಿಯ"
- " ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು"
- " ಮೊದಲು ಕಣ್ಣು ಬಿಡು, ನಂತರ ಕೈ ಮಾಡು"
- " ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು"
- " ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ"
- " ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು"
- " ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?"
- " ಮೋಟಾಳಿಗೊಂದು ಚೋಟಾಳು"
- " ಮೋರೆ ಎಲ್ಲಮ್ಮನ ಗುಡ್ಡದಾಗ ಮುಲ್ಲಾಂದೇನು"
- " ಯಂಕ, ಸೀನ, ನೊಣ ಅಂತ ಮನೇಲಿ ಮೂರೇ ಜನ ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ"
- " ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ"
- " ಯಥಾ ರಾಜಾ ತಥಾ ಪ್ರಜಾ"
- " ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು"
- " ಯಾಕೊಲ್ಲೆ ಅಂದ್ರೆ ಇಲ್ಲದ್ದಕ್ಕೊಲ್ಲೆ"
- " ಯಾಕೊಲ್ಲೆ? ಇಲ್ಲದ್ದಕ್ಕೊಲ್ಲೆ"
- " ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ"
- " ಯಾರದೊ ದುಡ್ಡಿನಲ್ಲಿ ಯೆಲ್ಲಮನ್ನ ಜಾತ್ರೆ"
- " ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ"
- " ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ"
- " ಯಾರನ್ನ ನಂಬಿದರು ಆರೈದು ನಂಬಬೇಕು"
- " ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು ನಿಜವ"
- " ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ"
- " ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ"
- " ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು"
- " ಯಾವ ಚಿಂತೇನೂ ಮಾಡದೋನ ಹೆಂಡ್ತಿ ಗಂಡಿದ್ದೂ ಮುಂಡೆ"
- " ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ"
- " ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ"
- " ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ"
- " ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ"
- " ಯುದ್ಧಕಾಲೇ ಶಸ್ತ್ರಾಭ್ಯಾಸ"
- " ಯೋಗ ಇದ್ದಷ್ಟೇ ಭೋಗ"
- " ಯೋಗ ಇದ್ದಷ್ಟೇ ಭೋಗ ಹಾಕ್ಮಣೆ,"
- " ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ"
- " ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು"
- " ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ"
- " ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ"
- " ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?"
- " ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ"
- " ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು"
- " ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು"
- " ರವಿ ಕಾಣದ್ದನ್ನು ಕವಿ ಕಂಡ"
- " ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ"
- " ರಸ ಬೆಳೆದು ಕಸ ತಿನ್ನಬೇಡ,"
- " ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ"
- " ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು"
- " ರಸಿಕನ ನುಡಿ ತಿಂಗಳ ಬೆಳಕಿನಂತೆ"
- " ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?"
- " ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ"
- " ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ"
- " ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು"
- " ರಾಜ ಇರೋತನಕ ರಾಣಿ ಭೋಗ"
- " ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ"
- " ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ"
- " ರಾತ್ರೆಯೆಲ್ಲ ರಾಮಾಯಣ ಕೇಳಿ ರಮಣ್ಣಂಗೂ ಸೀತಕ್ಕಂಗೂ ಏನಾಯ್ತು ? ಅಂದ್ರಂತೆ"
- " ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ"
- " ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ"
- " ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ"
- " ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ"
- " ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ ."
- " ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?"
- " ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ"
- " ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ"
- " ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು"
- " ರೈತನ ಮುಗ್ಗು ನಾಡಿನ ಕುಗ್ಗು"
- " ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು"
- " ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ"
- " ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ"
- " ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ"
- " ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ"
- " ರೋಹಿಣಿ ಮಳೆ ಓಣಿಯೆಲ್ಲಾ ಕೆಸರು"
- " ಲಂಘನಮ್ ಪರಮೌಷಧಮ್"
- " ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು"
- " ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ"
- " ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು"
- " ಲಕ್ಷ್ಮಿ ಚಂಚಲೆ"
- " ಲಲನೆಯರ ಒಲುಮೆ ತೊಲಗಿದರೆ ಇಲ್ಲ"
- " ಲಲನೆಯರ ಒಲುಮೆ ತೊಲಗಿದರೆ ಇಲ್ಲ ಇಂಬರಿದು ಕೊಡುವಳೆ ರಂಭೆ"
- " ಲಾಭ ನೋಡಿ ಬಾಳೆ ಹಣ್ಣು ತಿಂದಂತೆ"
- " ಲಾಭ ನೋಡಿ ಬಾಳೆ ಹಣ್ಣು ತಿಂದಂತೆ."
- " ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ"
- " ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು"
- " ಲಿಂಗ ಹರಿದ ಮೇಲೆ ಜಂಗಮನ ಹಂಗೇನು"
- " ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು"
- " ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು"
- " ಲೋಕ ತಿಳೀಬೇಕು ಲೆಕ್ಕ ಕಲೀಬೇಕು"
- " ವಯಸ್ಸಿಗೆ ತಕ್ಕ ಬುದ್ಧಿ ಕಲಿ"
- " ವರ ಪಡೆದುಕೊಂಡಂತೆ ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ"
- " ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು"
- " ವಶಗೆಡದೆ ಹಸಗೆಡಲ್ಲ"
- " ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು"
- " ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ"
- " ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ"
- " ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ"
- " ವಿಧಿ ಕಾಣದ ಎಡೆಗಳಿಲ್ಲ"
- " ವಿಧಿ ಬಂದು ಆತುಕೊಣ್ತು ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು"
- " ವಿಧಿ ಮುನಿದರೆ ಸರಿ ಬೆಸವಾಯ್ತು"
- " ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ"
- " ವಿನಾಶ ಕಾಲಕ್ಕೆ ವಿಪರೀತ ಬುದ್ಧಿ"
- " ವಿನಾಶ ಕಾಲೇ ವಿಪರೀತ ಬುದ್ಧಿ"
- " ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ"
- " ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ."
- " ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ"
- " ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು"
- " ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು."
- " ವೇದ ಸುಳ್ಳಾದರು ಗಾದೆ ಸುಳ್ಳಾಗದು."
- " ವೇದ ಸುಳ್ಳಾದ್ರು ಗಾದೆ ಸುಳ್ಳಲ್ಲ."
- " ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?"
- " ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ"
- " ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು"
- " ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ"
- " ವ್ರತ ಕೆಟ್ಟರೂ ಸುಖ ಪಡಬೇಕು"
- " ಶಂಖದಿಂದ ಬಂದರೇ ತೀರ್ಥ ಹನಿಹನಿಗೂಡಿದರೆ ಹಳ್ಳ;"
- " ಶಂಖದಿಂದ ಬಿದ್ದರೆ ತೀರ್ಥ"
- " ಶರಣರ ಬದುಕನ್ನು ಅವರ ಮರಣದಲ್ಲಿ ನೋಡು"
- " ಶರಣು ಆದವನಿಗೆ ಮರಣವಿಲ್ಲ"
- " ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ"
- " ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ."
- " ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ"
- " ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ."
- " ಶಿವ ಪೂಜೇಲಿ ಕರಡಿ ಬಿಟ್ಟಂಗೆ"
- " ಶಿವಪೂಜೇಲಿ ಕರಡಿ/ಕರಡಿಗೆ ಬಿಟ್ಟ ಹಾಗೆ"
- " ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ"
- " ಶಿವರಾತ್ರಿ ಮನೆಗೆ ಏಕಾದಶಿ ಬಂದಹಾಗೆ"
- " ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ"
- " ಶಿಸ್ತುಗಾರ ಪುಟ್ಟಶಾಮಿ ಎದೆ ಸೀಳಿದ್ರೆ ಮೂರಕ್ಷರಾನೂ ಇಲ್ಲ"
- " ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ"
- " ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ"
- " ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು"
- " ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು"
- " ಶೆಟ್ಟಿಬಿಟ್ಟಲ್ಲೆ ಪಟ್ಟಣ"
- " ಶ್ರೀಮಂತನ ಮನೆ ಸೀಮಂತಕ್ಕೆ ಬಡವ ಬಡಬಡಿಸಿದ ಹಾಗೆ"
- " ಸಂಕಟ ಬಂದಾಗ ವೆಂಕಟರಮಣ"
- " ಸಂಕಟ ಬಂದ್ರೆ ವೆಂಕಟ ರಮಣ"
- " ಸಂಕೋಚ ಮಾಡಿದರೆ ಸಂಕಪಾಷಾಣವೂ ಸಿಗದು"
- " ಸಂತೆ ಕಟ್ಟೋಕು ಮೊದಲೇ ಸೇರಿದರು"
- " ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು"
- " ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ."
- " ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು"
- " ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ"
- " ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ"
- " ಸಂತೆಯ ಹೊತ್ತಿಗೆ ಮೂರು ಮೊಳ ನೇಯ್ದರಂತೆ"
- " ಸಂತೇಲಿ ಮಂತ್ರ ಹೇಳಿದಂಗೆ"
- " ಸಂತೇಲಿ ಮಂತ್ರ ಹೇಳಿದಂಗೆ ಸಂದೀಲಿ ಸಮಾರಾಧನೆ ಮಾಡ್ದಂಗೆ"
- " ಸಂತೇಲಿ ಮನೇ ಮಾಡಿ ಸದ್ದಿಗಂಜೂದೇ"
- " ಸಂತೋಷವೇ ಯೌವನ, ಚಿಂತೆಯೇ ಮುಪ್ಪು"
- " ಸಂದೀಲಿ ಸಮಾರಾಧನೆ ಎದ್ದರೆ ಆಳಲ್ಲ ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ"
- " ಸಂದೀಲಿ ಸಮಾರಾಧನೆ ಮಾಡ್ದಂಗೆ"
- " ಸಂಸಾರ ಗುಟ್ಟು; ವ್ಯಾಧಿ ರಟ್ಟು ಮದುವೇಲಿ ಗಂಡು,"
- " ಸಂಸಾರದಲ್ಲಿ ಸುಖವಿದೆ, ಬಾಳೆಂಬ ಬಂಧನದಲ್ಲಿ ಕಷ್ಟವಿದೆ"
- " ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ"
- " ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು"
- " ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು"
- " ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ"
- " ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ."
- " ಸಜ್ಜನರ ಸಂಗ ಹೆಜ್ಜೇನು ಸವಿದಂತೆ"
- " ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ"
- " ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ"
- " ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ"
- " ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ"
- " ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ"
- " ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ"
- " ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ"
- " ಸತ್ತು ಕೊಳ್ಳೋ ಸೊರ್ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು"
- " ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ"
- " ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ"
- " ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ"
- " ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ."
- " ಸದಾಶಿವನಿಗೆ ಅದೇ ಧ್ಯಾನ"
- " ಸನ್ಯಾಸಿ ಬೆಕ್ಕು ಸಾಕಿದ ಹಾಗೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ"
- " ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ"
- " ಸನ್ಯಾಸಿಗೆ ಸುಳ್ಳು ಹೇಳಿದರೂ ನಿಜದ ತಲೆಯ ಮೇಲೆ ಹೊಡೆದಂಗೆ ಹೇಳಬೇಕು"
- " ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು"
- " ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ"
- " ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು"
- " ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)"
- " ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ"
- " ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,"
- " ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ"
- " ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ"
- " ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ"
- " ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ"
- " ಸರಿ ಮನೆಯವರು ಸರಿಗೆ ಹಾಕಿಕೊಂಡರೆ ನೆರೆ ಮನೆಯವರು ನೇಣು ಹಾಕಿಕೊಂಡರಂತೆ"
- " ಸರಿ ಸರಿಯಾಗಿದ್ರೆ, ಪರಿ ಪರಿ ನೆಂಟರು"
- " ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ"
- " ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ"
- " ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ"
- " ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ."
- " ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ"
- " ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ"
- " ಸಾದೆತ್ತಿಗೆ ಎರಡು ಹೇರು (ಹೊರೆ)"
- " ಸಾಮವೇದದ ಗಾನ"
- " ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ"
- " ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ"
- " ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ"
- " ಸಾಯ್ತೀನಿ ಸಾಯ್ತೀನಿ ಅಂತಾ ಸಾವಿರ ಕೋಳಿ ತಿಂದಳಂತೆ"
- " ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ."
- " ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ"
- " ಸಾಲ ಕೊಳ್ಳುವಾಗ ಒಂದು ರಾಗ, ಸಾಲ ಹೊಳ್ಳಿ ಕೊಡುವಾಗ ನಾನಾ ರಾಗ"
- " ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ"
- " ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ"
- " ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು"
- " ಸಾಲಗಾರನ ಹೆಂಡತಿ ಶೋಕಿಮಾಡಿದರೇನು?"
- " ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ"
- " ಸಾವಿರ ಉಳಿ ಪೆಟ್ಟು, ಒಂದು ಚಿತ್ತಾರ ಕಾಣದಿರೋ"
- " ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ"
- " ಸಾವಿರ ಕೊಟ್ಟರೂ ಸವತಿ ಮನೆ ಬೇಡ"
- " ಸಾವಿರ ಚಿತ್ತಾರ ಮಸಿ ನುಂಗಿತು"
- " ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ"
- " ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ"
- " ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು"
- " ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು"
- " ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು"
- " ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು."
- " ಸಾವಿರ ಸುಳ್ಳು ಹೇಳಿ ಮದುವೆ ಮಾಡು"
- " ಸಾವಿಲ್ಲದ ಮನೆಯಿಲ್ಲ, ಸೋಲಿಲ್ಲದ ಮನುಷ್ಯನಿಲ್ಲ"
- " ಸಿಟ್ಟು ಬಂದರೆ ಪಡಿ ಹಿಟ್ಟು"
- " ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ"
- " ಸಿದ್ಧಾ ದೇವಿಗೆ ಸಿಡಿಲು ಬಡೀತು"
- " ಸಿರಿ ಸೋಂಕಿದವರ ಪರಿ ಬೇರೆ"
- " ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ"
- " ಸಿರಿತನ ಇರೂತನ ಹಿರಿತನ ಘನ ಸಿರಿಯಣ್ಣ"
- " ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ"
- " ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು"
- " ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು."
- " ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?"
- " ಸುಂಕದವನ ಮುಂದೆ ಸುಖದುಃಖವೇ"
- " ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ"
- " ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ"
- " ಸುಡುವ ಮನೆಯ ಗಳ ಹಿರಿದಂತೆ"
- " ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ"
- " ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ"
- " ಸುಳ್ಳು ದೇವರಿಗೆ ಕಳ್ಳ ಪೂಜಾರಿ"
- " ಸುಳ್ಳು ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು"
- " ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ"
- " ಸೂಳೆ ಕೈಲಿ ಜೋಳ ಕುಟ್ಟಿಸಿದ ಹಾಗೆ"
- " ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು"
- " ಸೂಳೆಗೆ ಮದುವೆ ಮಾಡಿದ ಹಾಗೆ"
- " ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ"
- " ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು"
- " ಸೇರಕ್ಕಿಯ ಗುಣ"
- " ಸೇರಿಗೆ ಸವ್ವಾ ಸೇರು"
- " ಸೇರಿಗೆ ಸವ್ವಾಸೇರು"
- " ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ"
- " ಸೊಕ್ಕುವುದು ಕೆಕ್ಕರಿಸಿ ನೋಡುವುದು"
- " ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು"
- " ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ"
- " ಸೋದರ ಮಾವನ ಚಾಳು ತುಂಡಪುಂಡರ ಪಾಲು"
- " ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ"
- " ಸ್ತ್ರೀ ರೂಪವೇ ರೂಪ, ಶೃಂಗಾರವೇ ರಸ"
- " ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು"
- " ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ"
- " ಸ್ವತಂತ್ರವೋ, ಸ್ವರ್ಗಲೋಕವೋ"
- " ಸ್ವರ್ಗ ಬೇಕು ಅಂದ"
- " ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು"
- " ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು."
- " ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ"
- " ಸ್ವಾತಿ ಮಳೆ ಮುತ್ತಿನ ಬೆಳೆ"
- " ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ"
- " ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ."
- " ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು"
- " ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು"
- " ಹಂಚಿದವರಿಗೆ ಹಲ್ಲು ಬಾಯಿ"
- " ಹಂಚು ಕಾಣದ ಕೈ ಕಂಚು ಕಾಣ್ತು"
- " ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು"
- " ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು"
- " ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು."
- " ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು"
- " ಹಗಲು ಅರಸನ ಕಾಟ ಇರುಳು ದೆವ್ವದ ಕಾಟ"
- " ಹಗಲೆಲ್ಲ ಹಾದರವಾಡಿ ಇರುಳು ಗಂಡನ ಹೇನು ಕಳೆದಳಂತೆ"
- " ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ"
- " ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು"
- " ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ"
- " ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ"
- " ಹಟ್ಟಿ ತುಂಬಾ ಹಸು, ಹಾಲು ಮಾತ್ರ ತುಸು"
- " ಹಡಗಿನ ವ್ಯಾಪರ, ಉಪ್ಪಿಗೆ ಬಡತನ"
- " ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ"
- " ಹಣ ಅಂದ್ರೆ ಹೆಣವೂ ಬಾಯಿ ಬಿಡುತ್ತದೆ"
- " ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ"
- " ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ"
- " ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ:"
- " ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ"
- " ಹಣ ಇಲ್ಲದವ ಹೆಣಕ್ಕಿಂತ ಕಡೆ"
- " ಹಣ ಎರವಲು ತಂದು ಮಣ ಉರುವಲು ಕೊಂಡ"
- " ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು"
- " ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ ಬಾಳು"
- " ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ"
- " ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ"
- " ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ"
- " ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು"
- " ಹತ್ತರ ಮಾತು ರುಚಿಯಲ್ಲ"
- " ಹತ್ತರೊಟ್ಟಿಗೆ ಹನ್ನೊಂದು"
- " ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು"
- " ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ"
- " ಹತ್ತಿರಕ್ಕೆ ಬಂದರೆ ಹಡಿಕ್ ನಾತ : ದೂರದಲ್ಲಿದ್ದರೆ ಘಮಘಮ"
- " ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು"
- " ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು."
- " ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ"
- " ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ"
- " ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ"
- " ಹತ್ತು ತಿಂಗಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ"
- " ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ"
- " ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ"
- " ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ"
- " ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ."
- " ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು"
- " ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು"
- " ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ."
- " ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ"
- " ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ"
- " ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ."
- " ಹಬ್ಬ ಹಸನಾಗಲಿ, ಗೋದಿ ಜತನಾಗಲಿ, ಬಂದ ಬೀಗರು ಉಂಡು ಹೋಗಲಿ"
- " ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ"
- " ಹಬ್ಬದ ದಿನವೂ ಹಳೇ ಗಂಡನೇ ?"
- " ಹರ ಮುನಿದರೆ ಗುರು ಕಾಯ್ವ"
- " ಹರಕಿನಲ್ಲಿ ಇಲಿ ಕಡಿಯಿತು"
- " ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ."
- " ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ"
- " ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ"
- " ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ"
- " ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ ಗವುಜಿ ಗದ್ದಲ ಏನೂ ಇಲ್ಲ,"
- " ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ"
- " ಹರೆಯಕ್ಕೆ ಬಂದಾಗ ಹಂದಿನೂ ಚಂದ"
- " ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ"
- " ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು"
- " ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ"
- " ಹಲ್ಲಿದ್ದವರಿಗೆ ಕಡಲೆಯಿಲ್ಲ,ಕಡಲೆಯಿದ್ದವರಿಗೆ ಹಲ್ಲಿಲ್ಲ"
- " ಹಲ್ಲಿದ್ದವರಿಗೆ ಕಡಲೆಯಿಲ್ಲ;ಕಡಲೆಯಿದ್ದವರಿಗೆ ಹಲ್ಲಿಲ್ಲ"
- " ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ"
- " ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ"
- " ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ"
- " ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ"
- " ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು"
- " ಹಸ ಕಟ್ಟಿ ಮೊಸರಿಗೆ ಪರದಾಡಬೇಡ"
- " ಹಸನಾದ ಮಾತಿಗೆ ಜೀವ ಬೆಸನಾಯ್ತು"
- " ಹಸಿ ಗೋಡೆ ಮೇಲೆ ಹರಳು ಎಸೆದಂತೆ"
- " ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು"
- " ಹಸಿದವನಿಗೆ ಹಳಸಿದ್ದೇ ಪಾವನ"
- " ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ"
- " ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು"
- " ಹಸು ಕರ್ರಗಿದ್ದರೆ ಹಾಲು ಕಪ್ಪೆ?"
- " ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ"
- " ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ"
- " ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ"
- " ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ"
- " ಹಳೇ ಗಂಡನ ಪಾದವೇ ಗತಿ"
- " ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ"
- " ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ"
- " ಹಾಂ ಅಂದ್ರೆ ಬಿಟ್ಟೇನೆ!ಹೂಂ ಅಂದ್ರೆ ಬಿಟ್ಟೇನೆ"
- " ಹಾಕು ಮಣೆ, ನೂಕು ಮಣೆ, ತಳ್ಳು ಮಣೆ, ಯಾಕ್ಮಣೆ"
- " ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ"
- " ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ"
- " ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ"
- " ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ"
- " ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ"
- " ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ"
- " ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ."
- " ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ."
- " ಹಾಡಿದ್ದೇ ಹಾಡಿದ ಕಿಸಬಾಯಿ ದಾಸ"
- " ಹಾಡಿದ್ದೇ ಹಾಡೋ ಕಿಸುಬಾಯಿದಾಸ"
- " ಹಾಡ್ತ ಹಾಡ್ತ ರಾಗ ;ನರಳ್ತ ನರಳ್ತ ರೋಗ"
- " ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ"
- " ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ"
- " ಹಾದರ ಹಾಲು ಸಕ್ಕರೆಯಂತೆ, ಬಯಲಾದರೆ, ಬೇವಿನ ಸಾರದಂತೆ"
- " ಹಾದರಗಿತ್ತಿ ಗಂಡನ ನಂಬಳು"
- " ಹಾದಿ ತಪ್ಪಿದವನಿಗೆ ಹದಿನೆಂಟು ಹಾದಿ"
- " ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು."
- " ಹಾಯೋ ಎತ್ತು ಹಾಯ್ದರೂ ಬಂತು ಬಿಟ್ಟರೂ ಬಂತು"
- " ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ"
- " ಹಾರುವ ಆಳಲ್ಲ, ಬಾಳೆ ದಡಿಯಲ್ಲ"
- " ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ"
- " ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ."
- " ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ"
- " ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ"
- " ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ."
- " ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ"
- " ಹಾರೋ ಹಕ್ಕಿಗೆ ಹಾದರ ಕಟ್ಟಿದರು."
- " ಹಾರ್ಸೋನೋ ತೀರ್ಸೋನೋ."
- " ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ"
- " ಹಾಲಿಗಿಂತ ಕೆನೆ ರುಚಿ"
- " ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು"
- " ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು."
- " ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ"
- " ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು"
- " ಹಾಲಿನ ದುಡ್ಡು ಹಾಲಿಗೆ; ನೀರಿನ ದುಡ್ಡು ನೀರಿಗೆ"
- " ಹಾಲಿನಲ್ಲಿ ಹುಳಿ ಹಿಂಡಿದಂತೆ"
- " ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ"
- " ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ ಕೊಡೋದು"
- " ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ್ಕೊಂಡು ನೀ ಬಂದೆ."
- " ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ"
- " ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?"
- " ಹಾಲು ಕುಡಿದು ಹಾಗಲಕಾಯಿ ತಿಂದಂತೆ"
- " ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ"
- " ಹಾಲುಕ್ಕಿದ ಮನೇಲಿ ಮೇಲ್ಗರೀಲಿ. (ಕಾಯಿಲೆ)"
- " ಹಾವಿಗೆ ಹಾಲೆರೆದರೇನು ಫಲ"
- " ಹಾವು ಸಾಯಬಾರದು , ಕೋಲು ಮುರೀಬಾರದು"
- " ಹಾವು ಸಾಯಬಾರದು ;ಕೋಲು ಮುರಿಯಬಾರದು"
- " ಹಾವುಸಾಯದು;ಕೋಲುಮುರೀದು"
- " ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ"
- " ಹಾಸಿಗೆ ಇದ್ದಷ್ಟು ಕಾಲು ಚಾಚು"
- " ಹಾಳೂರಿಗೆ ಉಳಿದವನೆ ಗೌಡ"
- " ಹಾಳೂರಿಗೆ ಉಳಿದವನೇ ಗೌಡ"
- " ಹಾಳೂರಿಗೆ ಉಳಿದೋನೇ ಗೌಡ,"
- " ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ"
- " ಹಿಂದಕ್ತಪ್ಪು, ಮುಂದಕ್ಬುದ್ಧಿ"
- " ಹಿಂದಲ ಮಾತು ಮರಿ ಮುಂದಲ ಬಾಳು ಅರಿ"
- " ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು"
- " ಹಿಟ್ಟು ಹಳಸಿತ್ತು; ನಾಯಿ ಹಸಿದಿತ್ತು"
- " ಹಿಡಿ ಘಟವ ನೆಚ್ಚದಿರು ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ"
- " ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು"
- " ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ"
- " ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು"
- " ಹಿತ್ತಲ ಗಿಡ ಮದ್ದಲ್ಲ"
- " ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ"
- " ಹಿತ್ತಿಲ ಗಿಡ ಮದ್ದಲ್ಲ"
- " ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ"
- " ಹಿರಿದು ಪಾಪ ಮಾಡಿ ಗಂಗೆಗೆ ಹರಿದರು"
- " ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ"
- " ಹಿರಿಯರ ಮಾತಿಗೆ ಕಿವಿಗೊಡು, ಚುಚ್ಚುಮಾತಿಗೆ ಬೆನ್ನು ಕೊಡು"
- " ಹಿರಿಯರಿಗೆ ಶಿರಬಾಗು, ಗುರುವಿಗೆ ತಲೆಬಾಗು"
- " ಹಿರೀ ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ"
- " ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ"
- " ಹಿರೀಮಗ ಆಗಬೇಡ, ಹಿತ್ತಿಲ ಕದ ಆಗಬೇಡ"
- " ಹಿರೇ ಕುದರೆ ಚೇಷ್ಟೆ ತಾನು ಬಾಳಲಾರದೆ ವಿಧಿಯ ಬೈದಂತೆ"
- " ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ"
- " ಹುಚ್ಚರ ಮದುವೆಯಲ್ಲಿ ಉಂಡವನೇ ಜಾಣ."
- " ಹುಚ್ಚಲ್ಲ, ಬೆಪ್ಪಲ್ಲ, ಶಿವಲೀಲೆ"
- " ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ"
- " ಹುಚ್ಚು ಬಿಡದೆ ಮದುವೆಯಾಗದು:ಮದುವೆಯಾಗದೆ ಹುಚ್ಚು ಬಿಡದು;"
- " ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ"
- " ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ"
- " ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು"
- " ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು."
- " ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ"
- " ಹುಟ್ಟಿದವಗೆ ಸಾವು ತಪ್ಪದು"
- " ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು"
- " ಹುಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ"
- " ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?"
- " ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ"
- " ಹುಟ್ಟು ಗುಣ ಸುಟ್ಟರೂ ಹೋಗಲ್ಲ"
- " ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ"
- " ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು"
- " ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು"
- " ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ"
- " ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ"
- " ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ."
- " ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ"
- " ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ?"
- " ಹುಣ್ಣಿನ ಮೇಲೆ ಉಪ್ಪು ಸವರಿದಂತೆ"
- " ಹುಣ್ಣಿಮೆ ಬರುವ ತನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು"
- " ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು"
- " ಹುಣ್ಣು ಮಾದರೂ ಕಲೆ ಮಾದೀತೇ"
- " ಹುತ್ತ ಬಡಿದರೆ ಹಾವು ಸಾಯುವುದೇ"
- " ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ"
- " ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ"
- " ಹುಲಿ ಹಸಿದಾಗ ಹುಲ್ಲು ತಿಂದೀತೆ?"
- " ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ"
- " ಹುಲಿಗೆ ಹುಣ್ಣು ಎದ್ದ ಹಾಗೆ"
- " ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ"
- " ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ."
- " ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ ಹೆದರುವವರ ಮೇಲೆ ಕಪ್ಪೆ ಎಸೆದಂತೆ"
- " ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ"
- " ಹೂಡಿದರೆ ಒಲೆ, ಮಡಿದರೆ ಮನೆ"
- " ಹೂ-ದವರು ಯಾರು ಅಂದರೆ ಮಾಸಿದ ಸೀರೆಯವರು."
- " ಹೂವ ತರುವ ಮನೆಗೆ ದೇವ ಹುಲ್ಲು ಹೊರುವ"
- " ಹೂವಿನ ಜೊತೆ ದಾರ ಮುಡಿಯೇರಿತು"
- " ಹೂವಿನಿಂದ ನಾರಿಗೂ ಸ್ವರ್ಗ"
- " ಹೂವಿನಿಂದ ನಾರು ಸ್ವರ್ಗ ಸೇರಿತು"
- " ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು"
- " ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ"
- " ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ"
- " ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ"
- " ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ"
- " ಹೆಂಡಕ್ಕೆ ರಾಗಿ ದಂಡ"
- " ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು"
- " ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು"
- " ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು."
- " ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ"
- " ಹೆಂಡತಿಯಿಲ್ಲದ ಮನೆ ದೇವರಿಲ್ಲದ ಗುಡಿ"
- " ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ"
- " ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ"
- " ಹೆಡ್ಡಾಳಾದ್ರೂ ದೊಡ್ಡಾಳು ಮೇಲು"
- " ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ"
- " ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ"
- " ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ"
- " ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು."
- " ಹೆಣ್ಣಿಗೆ ಹೆಣ್ಣೇ ವೈರಿ"
- " ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ"
- " ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ"
- " ಹೆಣ್ಣಿನ ಬಾಳು ಕಣ್ಣೀರಿನ ಗೋಳು"
- " ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು"
- " ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು"
- " ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ"
- " ಹೆಣ್ಣು ಚಂದ, ಕಣ್ಣು ಕುರುಡು"
- " ಹೆಣ್ಣು ಜಲ್ಮಕ್ಕೆ ಹೆಜ್ಜೆಗೊಂದು ಮುಳ್ಳು"
- " ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ"
- " ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ"
- " ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ"
- " ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ"
- " ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ"
- " ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು"
- " ಹೆತ್ತವರಿಗೆ ಹೆಗ್ಗಣ ಮುದ್ದು."
- " ಹೆತ್ತವರಿಗೆ ಹೆಗ್ಗಣ ಮುದ್ದು;ಕೂಡಿದವರಿಗೆ ಕೋಡಗ ಮುದ್ದು"
- " ಹೆತ್ತವರು ಹೆಸರಿಕ್ಕ ಬೇಕು"
- " ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು."
- " ಹೆದರಿದವರ ಮೇಲೆ ಕಪ್ಪೆ ಎಸೆದರು"
- " ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ"
- " ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ"
- " ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು"
- " ಹೇಮಗೇಡಿ ನೇಮ ಬೆಳಗಿದ ಭಂಗಿ"
- " ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ ತಾನೂ ಕುಡಿಯ ಕುಡಿಯಲೀಸ"
- " ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ"
- " ಹೇಳೊದು ವೇದ ಹಾಕೊದು ಗಾಳ"
- " ಹೇಳೋದು ಶಾಸ್ತ್ರ, ಹಾಕೋದು ಗಾಣ"
- " ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ"
- " ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?"
- " ಹೇಳ್ತ ಹೇಳ್ತ ಬಿಂದಿಗೆ ಕವುಚಿ ನೀರು ಸುರಿದರಂತೆ"
- " ಹೊಕ್ಕು ಬಳಸಿದರೆ ನಂಟು"
- " ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ"
- " ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ"
- " ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು"
- " ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು"
- " ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ"
- " ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು"
- " ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ"
- " ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು"
- " ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ."
- " ಹೊತ್ತಿರುವಾಗಲೇ ಗೊತ್ತು ಸೇರಬೇಕು"
- " ಹೊತ್ತು ಕಳೆದರೆ ಮತ್ತೆ ಬಾರದು"
- " ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು"
- " ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು"
- " ಹೊರಗೆ ಝಗ ಝಗ, ಒಳಗೆ ಭಗ ಭಗ"
- " ಹೊರಗೆ ಥಳುಕು, ಒಳಗೆ ಹುಳುಕು"
- " ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ"
- " ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ: ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ"
- " ಹೊಸ ಡಾಕ್ಟರ್ಗಿಂತ ಹಳೇ ಕಾಂಪೌಂಡರ್ ವಾಸಿ"
- " ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ"
- " ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು"
- " ಹೊಸದರಲ್ಲಿ ಅಗಸ ಗೋಣಿ ಎತ್ತಿ ಒಗೆದನಂತೆ"
- " ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ"
- " ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ"
- " ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?"
- " ಹೊಳೆಗೆ ಸುರಿದರೂ ಅಳೆದು ಸುರಿ"
- " ಹೊಳೆಗೆ ಸುರಿದರೂ ಅಳೆದು ಸುರಿ ಎಂದಂತೆ"
- " ಹೊಳೆದಾಟಿದ ಮೇಲೆ ಅಂಬಿಗ ಮಿಂಡ"
- " ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ"
- " ಹೊಳೆಯುವುದೆಲ್ಲಾ ಚಿನ್ನವಲ್ಲ"
- " ಹೊಳೆಯುವುದೆಲ್ಲಾ ಚಿನ್ನವಲ್ಲ."
- " ಹೋಗು ಅನ್ನಲಾರದೆ ಹೊಗೆ ಹಾಕಿದರಂತೆ"
- " ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು"
- " ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು."
- " ಹೋದ ಪುಟ್ಟ ಬಂದ ಪುಟ್ಟ"
- " ಹೋದ ಬದುಕಿಗೆ ಹನ್ನೆರಡು ದೇವರು"
- " ಹೋದ ಬದುಕಿಗೆ ಹನ್ನೆರಡು ದೇವರು ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ"
- " ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ"
- " ಹೋದೆಯ ಪಿಶಾಚಿ;ಇಲ್ಲ ಬಂದೆ ಗವಾಕ್ಷೀಲಿ"
- " ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ"
- " ಹೋದೆಯಾ ಪಿಶಾಚಿ ಅಂದ್ರೆ ಬಂದೆಯಾ ಗವಾಕ್ಷೀಲಿ"
- " ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು"
- " ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?"
- " ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ"
No comments:
Post a Comment